Featured

ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಆದರೆ, ಕಾಂಗ್ರೆಸ್ನಲ್ಲಿ ಈಗಾಗಲೇ ಹತ್ತು ಜನ ಸೂಟು-ಬೂಟು ಹೊಲಿಸಿದ್ದಾರೆ- ಕುಮಾರಸ್ವಾಮಿ ವ್ಯಂಗ್ಯ-vishwanews24

ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಆದರೆ, ಕಾಂಗ್ರೆಸ್ನಲ್ಲಿ ಈಗಾಗಲೇ ಹತ್ತು ಜನ ಸೂಟು-ಬೂಟು ಹೊಲಿಸಿದ್ದಾರೆ- ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: “ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಆದರೆ, ಕಾಂಗ್ರೆಸ್ನಲ್ಲಿ ಈಗಾಗಲೇ ಹತ್ತು ಜನ ಮುಖ್ಯಮಂತ್ರಿಯಾಗಲು ಸೂಟು-ಬೂಟು ಹೊಲಿಸಿಕೊಂಡು ಕಾದುಕುಳಿತಿದ್ದಾರೆ. ಇದು ಆ ಪಕ್ಷದಲ್ಲಿ ಅಧಿಕಾರದ ದಾಹಕ್ಕೆ ಹಿಡಿದ ಕನ್ನಡಿ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ನಗರದ ಜೆಡಿಎಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ನೂರಾರು ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಹತ್ತು ಜನ ಈಗ ಸಿಎಂ ಗದ್ದುಗೆ ಏರಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಪೈಕಿ ಒಬ್ಬ ನಾಯಕರು 2018ರ ಚುನಾವಣೆ ತಮ್ಮ ಕೊನೆಯ ಚುನಾವಣೆ ಎಂದು ಹೇಳಿದ್ದರು. ಆದರೆ, ಈ ಮತ್ತೆ ಮುಖ್ಯಮಂತ್ರಿ ಗಾದಿ ಏರಲು ಹಪಹಪಿಸುತ್ತಿದ್ದಾ ರೆ. ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಆದರೆ, ಈಗಲೇ ಮುಖ್ಯಮಂತ್ರಿ ಕನಸು ಕಾಣುತ್ತಿ¨ªಾರೆ. ಕಾಂಗ್ರೆಸ್ನವರು ದಾಖಲೆಗಳು ಇಲ್ಲದೆ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋ ಪ ಮಾಡುತ್ತಿ¨ªಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಸರು ಹೇಳದೆ ವಾಗ್ಧಾಳಿ ನಡೆಸಿದರು. ಬಿಜೆಪಿ ಅಧಿಕಾರಕ್ಕೆ ಕಾಂಗ್ರೆಸ್ ಕಾರಣ!: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸ್ವತಃ ಕಾಂಗ್ರೆಸ್ ಕಾರಣ. ಇದನ್ನು ಮುಸ್ಲಿಂ ಬಾಂಧವರು ಅರ್ಥಮಾಡಿಕೊಳ್ಳಬೇಕು. 2006ರಲ್ಲಿ ಜೆಡಿಎಸ್ ಅನ್ನು ಮುಗಿಸಲು ಕಾಂಗ್ರೆಸ್ ಹೊರಟಿತ್ತು. ಆಗ ನಾವು ಎಚ್ಚೆತ್ತು, ಪಕ್ಷವನ್ನು ಉಳಿಸಿಕೊಳ್ಳಲು ಬಿಜೆಪಿ ಜತೆ ಹೋಗಬೇಕಾಯಿತು. ಆದರೂ ನಮ್ಮ ತತ್ವ, ಸಿದ್ಧಾಂತ ಬಿಟ್ಟುಕೊಡಲಿಲ್ಲ. ಅಂದು ಬಿಜೆಪಿಯವರೇ ನಮ್ಮ ಮನೆ ಬಾಗಿಲಿಗೆ ಬಂದರು. 2013ರಲ್ಲಿ ನಮ್ಮ ಹೋರಾಟದ ಫಲವಾಗಿ ಬಿಜೆಪಿ ಮೂರು ಭಾಗವಾಯಿತು ಎಂದು ಮೆಲುಕುಹಾಕಿದರು. “ನಾನು ಅಧಿವೇಶನಕ್ಕೆ ಹೋಗುವುದನ್ನು ನಿಲ್ಲಿಸಿದ್ದೆ. ಇನ್ಮುಂ ದೆ ಮತ್ತೆ ಅಧಿವೇಶನಕ್ಕೆ ಬರುತ್ತೇ ನೆ. ಚರ್ಚೆಗೆ ಬರಲಿ ಮಾತನಾಡುತ್ತೇ ನೆ. ಸೂತಕದ ಮನೆಯಲ್ಲಿ ರಾಜಕೀಯ ಮಾಡಬಾರದು ಅಂತಾ ಸುಮ್ಮನಿದ್ದೆ. ಈಗ ನಮ್ಮ ಆಟ ಪ್ರಾರಂಭಿಸುತ್ತೇ ವೆ.ಇನ್ನು ಮುಂದೆ ನಮ್ಮ ಆಟ ಹೇಗಿರುತ್ತೆ ಎಂಬುದನ್ನು ನೋಡಲಿ’ ಎಂದು ಸವಾಲು ಹಾಕಿದರು. “ರೈತರು ಬದುಕಲು ಹೇಗೆ ಸಾಧ್ಯ ಎಂಬುದನ್ನು ನನ್ನ ತೋಟದಲ್ಲಿ ಮಾಡಿ ತೋರಿಸುತ್ತೇ ನೆ. ಜ. 15ರಿಂದ ನನ್ನ ಕಾರ್ಯಕ್ರಮ ಏನು ಅನ್ನೋ ದನ್ನ ತಿಳಿಸುತ್ತೇ ನೆ’ ಎಂದು ಕುಮಾರಸ್ವಾಮಿ ತಿಳಿಸಿದರು. “ನಾನು ಮುಖ್ಯಮಂತ್ರಿಯಾದರೆ ವೀರಶೈವ ಸಮಾಜ ಅತ್ಯಂ ತ ಗೌರವ ಕೊಡುವ ಪಂಚಾಕ್ಷರಿ ಕಾರ್ಯಕ್ರಮ ಕೊಡುತ್ತೇ ನೆ. ಆರೋಗ್ಯ, ರೈತ, ವಸತಿ, ಶಿಕ್ಷಣ ಮತ್ತು ಉದ್ಯೋ ಗಕ್ಕೆ ಸಂಬಂಧಿಸಿದಂತೆ ಪಂಚರತ್ನ ಕಾರ್ಯಕ್ರಮಕ್ಕೆ ನಿರ್ಧರಿಸಿದ್ದೇ ನೆ. ಅದಕ್ಕೆ ಪಂಚಾಕ್ಷರಿ ಎಂದು ಹೆಸರಿಡಲಿದ್ದೇ ನೆ. ಐದು ವರ್ಷದಲ್ಲಿ ಒಂದೊಂದು ಕಾರ್ಯಕ್ರಮ ಕೊಡುತ್ತೇ ನೆ’ ಎಂದೂ ಹೇಳಿದರು. ನಾನು ಈಗ ಬಿಡದಿ ತೋಟದ ಮನೆಯಲ್ಲಿ ವಾಸವಿದ್ದೇ ನೆ. ಬದುಕಿರುವವರೆಗೂ ಬಿಡದಿ ತೋಟದ ಮನೆಯೇ ನನ್ನ ಆಸ್ತಿ. ಯಾವ ವೆಸ್ಟ್ ಎಂಡ್ ಇಲ್ಲ; ರೈಟ್ ಎಂಡ್ ಇಲ್ಲ ಎಂದರು. ಜೆಡಿಎಸ್ ಕ್ವಾ ರಂಟೇನ್ನಲ್ಲಿದೆ ಅಂತ ಬಿಜೆಪಿ ಉಸ್ತುವಾರಿ ಹೇಳಿದ್ದಾರೆ. ಇಲ್ಲಿಂದ ದುಡ್ಡು ತೆಗೆದುಕೊಂಡು ಹೋಗಲು ಬರುವ ಅರುಣ್ ಸಿಂಗ್ ನಮ್ಮ ಬಗ್ಗೆ ಮಾತನಾಡಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಮ್ಮ ಜತೆ ಬಂದೆವು. ಆ ನಿಮ್ಮ ಸಹವಾಸದಿಂದ ನಮಗೆ ರೋಗ ಬಂತು ಎಂದು ಲೇವಡಿ ಮಾಡಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago