Featured

ಚುನಾವಣೆಗೆ ಪ್ರಣಾಳಿಕೆಯಿಂದ ಶಕ್ತಿ ಯಾವತ್ತು ಬರಲ್ಲ , ಬಿಜೆಪಿ ಪ್ರಣಾಳಿಕೆ ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ: ಡಿಕೆ.ಶಿ – Vishwanews24

ಚುನಾವಣೆಗೆ ಪ್ರಣಾಳಿಕೆಯಿಂದ ಶಕ್ತಿ ಯಾವತ್ತು ಬರಲ್ಲ , ಬಿಜೆಪಿ ಪ್ರಣಾಳಿಕೆ ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ: ಡಿಕೆ.ಶಿ

ಬೆಂಗಳೂರು: ಚುನಾವಣೆಗೆ ಪ್ರಣಾಳಿಕೆಯಿಂದ ಶಕ್ತಿ ಯಾವತ್ತು ಬರಲ್ಲ. ಸರ್ಕಾರ ಇದ್ದಾಗ ಜನರ ಪರ ಕೆಲಸ ಮಾಡುವ ಅವಕಾಶ ಇತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕೇವಲ ಭಾವನೆ ಬಗ್ಗೆ ಮಾತನಾಡಿದ್ದರು. ಬದುಕಿನ ಬಗ್ಗೆ ಚಿಂತನೆ ಮಾಡಲಿಲ್ಲ. ಹಾಗಾಗಿ, ಅವರ ಪ್ರಣಾಳಿಕೆ ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಕಪ್ಪು ಹಣ ವಾಪಸ್ ತರುವುದಾಗಿ, ಉದ್ಯೋಗ ಸೃಷ್ಟಿಸುವ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿತ್ತು. ಅದಾವುದೂ ಈಡೇರಲಿಲ್ಲ. ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಮೂರು ಕೃಷಿ ಮಸೂದೆಗಳನ್ನು ಜಾರಿಗೆ ತಂದಿದ್ದರು. ಅದರ ಕಾರ್ಯಸೂಚಿ ಹಿನ್ನಡೆಯಾದಾಗ ಕಾಯ್ದೆಗಳನ್ನು ಹಿಂಪಡೆದರು. ಈ ಹಿಂದಿನ ಭರವಸೆಗಳನ್ನೇ ಈಡೇರಿಸದಿರುವಾಗ ಹೊಸ ಭರವಸೆಗಳನ್ನು ಹೇಗೆ ಈಡೇರಿಸುತ್ತಾರೆ? ಎಂದು ಪ್ರಶ್ನಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾಂಕ್ರಾಮಿಕ ರೋಗ ಸಮಯದಲ್ಲಿ ಜನರನ್ನು ಉಳಿಸಲು 20 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ಅವರು ಪತ್ರಿಕೆಗಳಲ್ಲಿ ಜಾಹೀರಾತುಗಳ ಮೂಲಕ ವೆಚ್ಚದ ವಿವರಗಳನ್ನು ಬಹಿರಂಗಪಡಿಸಬೇಕು. ಕೋವಿಡ್ -19 ನಿಂದ ಸಾವನ್ನಪ್ಪಿದ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಹಸ್ತಾಂತರಿಸಲು ಬಿಜೆಪಿ ಸರ್ಕಾರ ನಿರಾಕರಿಸಿತ್ತು. ಜಗದೀಶ್ ಶೆಟ್ಟರ್ ಮತ್ತು ಇತರ ಬಿಜೆಪಿ ಸಂಸದರು ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಹಿಂತಿರುಗಿಸುವಂತೆ ಮೋದಿಯವರಿಗೆ ಮನವಿ ಮಾಡಲಿಲ್ಲ, ಆದರೆ ಡಿ.ಕೆ.ಸುರೇಶ್ ಅವರು ದೆಹಲಿಯಲ್ಲಿ ಅಂತಿಮ ವಿಧಿವಿಧಾನದವರೆಗೂ ಜೊತೆಗೆ ನಿಂತಿದ್ದರು. ಬಿಜೆಪಿಗೆ ಅಧಿಕಾರ ಕಳೆದುಕೊಳ್ಳುವ ಭಯವಿದೆ. ಹೀಗಾಗಿ ಕೇಂದ್ರವು ಕರ್ನಾಟಕದ 14 ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಕಣಕ್ಕಿಳಿಸಿದೆ ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 minutes ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

21 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago