Featured

ಚುನಾವಣೆಗೆ ಪ್ರಣಾಳಿಕೆಯಿಂದ ಶಕ್ತಿ ಯಾವತ್ತು ಬರಲ್ಲ , ಬಿಜೆಪಿ ಪ್ರಣಾಳಿಕೆ ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ: ಡಿಕೆ.ಶಿ – Vishwanews24

ಚುನಾವಣೆಗೆ ಪ್ರಣಾಳಿಕೆಯಿಂದ ಶಕ್ತಿ ಯಾವತ್ತು ಬರಲ್ಲ , ಬಿಜೆಪಿ ಪ್ರಣಾಳಿಕೆ ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ: ಡಿಕೆ.ಶಿ

ಬೆಂಗಳೂರು: ಚುನಾವಣೆಗೆ ಪ್ರಣಾಳಿಕೆಯಿಂದ ಶಕ್ತಿ ಯಾವತ್ತು ಬರಲ್ಲ. ಸರ್ಕಾರ ಇದ್ದಾಗ ಜನರ ಪರ ಕೆಲಸ ಮಾಡುವ ಅವಕಾಶ ಇತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕೇವಲ ಭಾವನೆ ಬಗ್ಗೆ ಮಾತನಾಡಿದ್ದರು. ಬದುಕಿನ ಬಗ್ಗೆ ಚಿಂತನೆ ಮಾಡಲಿಲ್ಲ. ಹಾಗಾಗಿ, ಅವರ ಪ್ರಣಾಳಿಕೆ ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಕಪ್ಪು ಹಣ ವಾಪಸ್ ತರುವುದಾಗಿ, ಉದ್ಯೋಗ ಸೃಷ್ಟಿಸುವ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿತ್ತು. ಅದಾವುದೂ ಈಡೇರಲಿಲ್ಲ. ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಮೂರು ಕೃಷಿ ಮಸೂದೆಗಳನ್ನು ಜಾರಿಗೆ ತಂದಿದ್ದರು. ಅದರ ಕಾರ್ಯಸೂಚಿ ಹಿನ್ನಡೆಯಾದಾಗ ಕಾಯ್ದೆಗಳನ್ನು ಹಿಂಪಡೆದರು. ಈ ಹಿಂದಿನ ಭರವಸೆಗಳನ್ನೇ ಈಡೇರಿಸದಿರುವಾಗ ಹೊಸ ಭರವಸೆಗಳನ್ನು ಹೇಗೆ ಈಡೇರಿಸುತ್ತಾರೆ? ಎಂದು ಪ್ರಶ್ನಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾಂಕ್ರಾಮಿಕ ರೋಗ ಸಮಯದಲ್ಲಿ ಜನರನ್ನು ಉಳಿಸಲು 20 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ಅವರು ಪತ್ರಿಕೆಗಳಲ್ಲಿ ಜಾಹೀರಾತುಗಳ ಮೂಲಕ ವೆಚ್ಚದ ವಿವರಗಳನ್ನು ಬಹಿರಂಗಪಡಿಸಬೇಕು. ಕೋವಿಡ್ -19 ನಿಂದ ಸಾವನ್ನಪ್ಪಿದ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಹಸ್ತಾಂತರಿಸಲು ಬಿಜೆಪಿ ಸರ್ಕಾರ ನಿರಾಕರಿಸಿತ್ತು. ಜಗದೀಶ್ ಶೆಟ್ಟರ್ ಮತ್ತು ಇತರ ಬಿಜೆಪಿ ಸಂಸದರು ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಹಿಂತಿರುಗಿಸುವಂತೆ ಮೋದಿಯವರಿಗೆ ಮನವಿ ಮಾಡಲಿಲ್ಲ, ಆದರೆ ಡಿ.ಕೆ.ಸುರೇಶ್ ಅವರು ದೆಹಲಿಯಲ್ಲಿ ಅಂತಿಮ ವಿಧಿವಿಧಾನದವರೆಗೂ ಜೊತೆಗೆ ನಿಂತಿದ್ದರು. ಬಿಜೆಪಿಗೆ ಅಧಿಕಾರ ಕಳೆದುಕೊಳ್ಳುವ ಭಯವಿದೆ. ಹೀಗಾಗಿ ಕೇಂದ್ರವು ಕರ್ನಾಟಕದ 14 ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಕಣಕ್ಕಿಳಿಸಿದೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago