Featured

ಚುನಾವಣೆಗೆ  ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ : ಅಮಿತ್‌ ಶಾ – Vishwanews24

ಚುನಾವಣೆಗೆ  ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ : ಅಮಿತ್‌ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಲೋಕಸಭಾ ಚುನಾವಣೆಗೆ  ಮುನ್ನ ಜಾರಿಗೆ ತರುವುದಾಗಿ ಗೃಹ ಸಚಿವ ಅಮಿತ್‌ ಶಾ  ಹೇಳಿದ್ದಾರೆ.

ಖಾಸಗಿ ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಎ ದೇಶದ ಕಾಯ್ದೆಯಾಗಿದೆ. ಅದನ್ನು ಖಂಡಿತವಾಗಿಯೂ ಲೋಕಸಭಾ ಚುನಾವಣೆಗೆ ಮುನ್ನವೇ ನೋಟಿಫೈ ಮಾಡಲಾಗುವುದು ಅದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

ಸಿಎಎ ಕಾಂಗ್ರೆಸ್ ಸರ್ಕಾರದ  ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶದಲ್ಲಿದ್ದ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಆಶ್ರಯ ನೀಡಿ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಕಾಂಗ್ರೆಸ್‌ ಆ ಭರವಸೆಯಿಂದ ಹಿಂದಕ್ಕೆ ಸರಿಯುತ್ತಿದೆ ಎಂದು ಶಾ ದೂರಿದರು.

ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯ್ದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ ಎಂದು ವಿವರಿಸಿದರು.

2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಪರಿಣಾಮ ಇನ್ನೂ ಸಿಎಎ ಜಾರಿಯಾಗಿಲ್ಲ.

ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 days ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 days ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 days ago