Featured

ಚುನಾವಣೆಯಲ್ಲಿ ಗೆದ್ದರೆ ನಿರಂತರವಾಗಿ ಮತದಾರರ ಸುಖದುಖಃಗಳಿಗೆ ಸ್ಪಂಧಿಸುತ್ತೇನೆ: ಅಮೃತ್ ಶೆಣೈ – Vishwanews24

ಚಿಕ್ಕಮಗಳೂರು : ಚುನಾವಣೆಯಲ್ಲಿ ತಾನು ಗೆದ್ದರೆ ನಿರಂತರವಾಗಿ ಮತದಾರರ ಸುಖ ದುಃಖಗಳಿಗೆ ಸ್ಪಂದಿಸುವುದಾಗಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ ಹೇಳಿದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರಿ ಅಮೃತ್ ಶೆಣೈಯವರು ಇಂದು ಶೃಂಗೇರಿಯ ಬಾಳೆಹೊನ್ನೂರು ಬಳಿ ತಮ್ಮ ಚುನಾವಣಾ ಪ್ರಚಾರವಾಗಿ ಮಾತನಾಡುತ್ತಾ, ಈಗಿನ ವಾತವರಣದಲ್ಲಿ ಅಭ್ಯರ್ಥಿಗಳು ಪರಸ್ಪರ ಕೆಸೆರೆಚಾಟದಲ್ಲಿ ತೊಡಗಿಕೊಂಡಿದ್ದಾರೆ. ಅಭಿವೃದ್ದಿಯ ಬಗ್ಗೆ ಮಾತನಾಡದೆ ಕೇವಲ ಟಿಕೆ ಟಿಪ್ಪಣಿಗಳಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಹೇಳಿದರು.

ತಾನು ಕಾಂಗ್ರೆಸ್ ಪಕ್ಷದಲ್ಲಿ ಒಂದು ದಶಕಕ್ಕೂ ಮಿಕ್ಕಿ ನಿಸ್ವಾರ್ಥದಿಂದ ದುಡಿದು ಕಳೆದ 5 ವರ್ಷದಲ್ಲಿ ಸಿಕ್ಕ ಎಲ್ಲಾ ಅವಕಾಶಗಳಲ್ಲಿ ಪ್ರಸ್ತುತ ಸಂಸದೆ ಶೋಭಾ ಕರಂದ್ಲಾಜೆ ಅವರ ನಿಷ್ಕ್ರೀಯತೆಯನ್ನು ಅದೇ ರೀತಿ ಕೇಂದ್ರ ಸರಕಾರದ ವೈಫಲ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಿಕೊಂಡು ಬಂದಿರುತ್ತೇನೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ವಾತಾವರಣವಿದ್ದರೂ ಸಹ ಕ್ಷೇತ್ರವನ್ನು ಜೆಡಿಎಸ್ ನವರಿಗೆ ಕೊಟ್ಟಿರುವುದುನ್ನು ವಿರೋಧಿಸಿ, ಜೆಡಿಎಸ್ ನವರು ತನ್ನ ಬಳಿ ಯಾರೇ ಅಭ್ಯರ್ಥಿ ಇಲ್ಲದೆ ಕಾಂಗ್ರೆಸ್ ಪಕ್ಷದ ಪ್ರಮೋದ್ ಮಧ್ವರಾಜ್ ಅವರಿಗೆ ಟಿಕೇಟ್ ನೀಡಿರುವುದನ್ನು ವಿರೋಧೀಸಿ ಸ್ವತಂತ್ರವಾಗಿ ವಜ್ರದ ಚಿಹ್ನೆಯ ಅಡಿಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದರು.

ವಜ್ರದಂತೆ ಕಠಿಣನಾಗಿ ಸಾಮಾಜಿಕ ಸಾಮರಸ್ಯ ಕೆಡಹುವ ಶಕ್ತಿಗಳ ವಿರುದ್ಧ ಹೋರಾಡಲು ಸಿದ್ಧನಿದ್ದೇನೆ. ಈಗಾಗಲೇ ಕ್ಷೇತ್ರದಾದ್ಯಂತ ಅಭೂತಪೂರ್ವವಾಗಿ ಜನರು ಬೆಂಬಲಿಸುತ್ತಿದ್ದಾರೆ. ಬಾಳೆಹೊನ್ನೂರಿನ ಪ್ರಜ್ಙವಂತ ಮತದಾರರೂ ಕೂಡಾ ಆಶೀರ್ವಧಿಸಬೇಕೆಂದು ಕೇಳಿಕೊಂಡರು.

ಈ ವೇಳೆ ಮನೋಶಾಸ್ತ್ರಜ್ಞೆ ಜಯಶ್ರೀ ಭಟ್, ಇರ್ಫಾನ್, ರಾಜೇಶ್, ದಿನೇಶ್, ಸಫಾನ್ ಉಪಸ್ಥಿತರಿದ್ದರು.

 

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

50 minutes ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

2 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

2 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

2 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

3 hours ago