Featured

ಚುನಾವಣೆಯಲ್ಲಿ ಗೆಲ್ಲಬೇಕೆಂದಿದ್ದರೆ ಆರೆಸ್ಸೆಸ್ ರೀತಿಯಲ್ಲಿ ಕೆಲಸ ಮಾಡಿ : ಶರದ್ ಪವಾರ್ Vishwanews24

ಮುಂಬೈ, : “ನಿಮಗೆ ಚುನಾವಣೆಯಲ್ಲಿ ಗೆಲ್ಲಬೇಕೆಂದಿದ್ದರೆ ಆರೆಸ್ಸೆಸ್ ರೀತಿಯಲ್ಲಿ ಕೆಲಸ ಮಾಡಿ” ಎಂದು ತನ್ನ ಸೈದ್ಧಾಂತಿಕ ವಿರೋಧಿಯನ್ನು ಎನ್ ಸಿ ಪಿ ನಾಯಕ ಶರದ್ ಪವಾರ್ ನೇರವಾಗಿಯೇ ಹೊಗಳಿದ್ದಾರೆ.

“ಪ್ರಚಾರಕ್ಕೆ ಹೋಗುವ ಮುನ್ನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುಸ್ತಕದ ಎರಡು ಹಾಳೆಗಳನ್ನು ಒಮ್ಮೆ ತಿರುವಿ ಹಾಕಿ. ಇಂದಿನಿಂದಲೇ ಪಕ್ಷದ ಕಾರ್ಯಕರ್ತರು ಮನೆ ಮೆನೆಗೆ ತೆರಳಿ ಸಮಸ್ಯೆ ಆಲಿಸಿ, ಪ್ರಚಾರ ಮಾಡಿ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಅದು ನೆರವಾಗುತ್ತದೆ. ಈಗಿನಿಂದಲೇ ಮತದಾರರ ಮನೆಗೆ ತೆರಳಿ ಪ್ರಚಾರ ಮಾಡಿದರೆ ಚುನಾವಣೆಯ ಹೊತ್ತಲ್ಲಿ ಮಾತ್ರ ಯಾಕೆ ಮನೆಗೆ ಬರುತ್ತೀರಿ ಎಂದು ಮತದಾರ ಪ್ರಶ್ನಿಸುವ ಪ್ರಮೇಯ ಬರುವುದಿಲ್ಲ” ಎಂದು ಪವಾರ್ ಹೇಳಿದರು.

“ನೀವು(ಪಕ್ಷದ ಕಾರ್ಯಕರ್ತರು) ಆರೆಸ್ಸೆಸ್ ಸ್ವಯಂಸೇವಕರು ಹೇಗೆ ಪ್ರಚಾರ ಮಾಡುತ್ತಾರೆ ಎಂಬುದನ್ನು ನೋಡಬೇಕು.

ಅವರು ಐದು ಮನೆಗೆ ತೆರಳಿದರೆ, ಅದರಲ್ಲಿ ಒಂದು ಮನೆ ಮುಚ್ಚಿದ್ದರೂ, ತಮ್ಮ ಸಂದೇಶ ಆ ಮನೆಯ ಎಲ್ಲರಿಗೂ ತಲುಪುವವರೆಗೂ ಅವರು ತಮ್ಮ ಪ್ರಯತ್ನ ಬಿಡುವುದಿಲ್ಲ. ಜನರೊಂದೆಗ ಹೇಗೆ ಬೆರೆಯಬೇಕು, ಹೇಗೆ ಜನರ ವಿಶ್ವಾಸ ಗಳಿಸಬೇಕು, ಸಂಪರ್ಕ ಬೆಳೆಸಿಕೊಳ್ಳಬೇಕು ಎಂಬುದರಲ್ಲಿ ಆರೆಸ್ಸೆಸ್ ಕಾರ್ಯಕರ್ತರು ಎತ್ತಿದ ಕೈ” ಎಂದು ಅವರು ಹೇಳಿದರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

17 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

17 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

17 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

18 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

20 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

21 hours ago