ಮುಂಬೈ, : “ನಿಮಗೆ ಚುನಾವಣೆಯಲ್ಲಿ ಗೆಲ್ಲಬೇಕೆಂದಿದ್ದರೆ ಆರೆಸ್ಸೆಸ್ ರೀತಿಯಲ್ಲಿ ಕೆಲಸ ಮಾಡಿ” ಎಂದು ತನ್ನ ಸೈದ್ಧಾಂತಿಕ ವಿರೋಧಿಯನ್ನು ಎನ್ ಸಿ ಪಿ ನಾಯಕ ಶರದ್ ಪವಾರ್ ನೇರವಾಗಿಯೇ ಹೊಗಳಿದ್ದಾರೆ.
“ಪ್ರಚಾರಕ್ಕೆ ಹೋಗುವ ಮುನ್ನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುಸ್ತಕದ ಎರಡು ಹಾಳೆಗಳನ್ನು ಒಮ್ಮೆ ತಿರುವಿ ಹಾಕಿ. ಇಂದಿನಿಂದಲೇ ಪಕ್ಷದ ಕಾರ್ಯಕರ್ತರು ಮನೆ ಮೆನೆಗೆ ತೆರಳಿ ಸಮಸ್ಯೆ ಆಲಿಸಿ, ಪ್ರಚಾರ ಮಾಡಿ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಅದು ನೆರವಾಗುತ್ತದೆ. ಈಗಿನಿಂದಲೇ ಮತದಾರರ ಮನೆಗೆ ತೆರಳಿ ಪ್ರಚಾರ ಮಾಡಿದರೆ ಚುನಾವಣೆಯ ಹೊತ್ತಲ್ಲಿ ಮಾತ್ರ ಯಾಕೆ ಮನೆಗೆ ಬರುತ್ತೀರಿ ಎಂದು ಮತದಾರ ಪ್ರಶ್ನಿಸುವ ಪ್ರಮೇಯ ಬರುವುದಿಲ್ಲ” ಎಂದು ಪವಾರ್ ಹೇಳಿದರು.
“ನೀವು(ಪಕ್ಷದ ಕಾರ್ಯಕರ್ತರು) ಆರೆಸ್ಸೆಸ್ ಸ್ವಯಂಸೇವಕರು ಹೇಗೆ ಪ್ರಚಾರ ಮಾಡುತ್ತಾರೆ ಎಂಬುದನ್ನು ನೋಡಬೇಕು.
ಅವರು ಐದು ಮನೆಗೆ ತೆರಳಿದರೆ, ಅದರಲ್ಲಿ ಒಂದು ಮನೆ ಮುಚ್ಚಿದ್ದರೂ, ತಮ್ಮ ಸಂದೇಶ ಆ ಮನೆಯ ಎಲ್ಲರಿಗೂ ತಲುಪುವವರೆಗೂ ಅವರು ತಮ್ಮ ಪ್ರಯತ್ನ ಬಿಡುವುದಿಲ್ಲ. ಜನರೊಂದೆಗ ಹೇಗೆ ಬೆರೆಯಬೇಕು, ಹೇಗೆ ಜನರ ವಿಶ್ವಾಸ ಗಳಿಸಬೇಕು, ಸಂಪರ್ಕ ಬೆಳೆಸಿಕೊಳ್ಳಬೇಕು ಎಂಬುದರಲ್ಲಿ ಆರೆಸ್ಸೆಸ್ ಕಾರ್ಯಕರ್ತರು ಎತ್ತಿದ ಕೈ” ಎಂದು ಅವರು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…