Featured

ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಎಲ್ಲರನ್ನೂ ಪಶ್ಚಿಮ ಬಂಗಾಳದಿಂದ ಓಡಿಸುತ್ತಾರೆ : ಮಮತಾ ಬ್ಯಾನರ್ಜಿ -Vishwanews24

ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಎಲ್ಲರನ್ನೂ ಪಶ್ಚಿಮ ಬಂಗಾಳದಿಂದ ಓಡಿಸುತ್ತಾರೆ : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತ್ತಾ: ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಎಲ್ಲರನ್ನೂ ಪಶ್ಚಿಮ ಬಂಗಾಳದಿಂದ ಓಡಿಸುತ್ತಾರೆ ಎಂದು ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎರಡನೇ ಸುತ್ತಿನ ಮತದಾನ ಹತ್ತಿರವಾಗುತ್ತಿದ್ದಂತೆ ರಾಜಕೀಯ ರ್ಯಾಲಿಗಳು ಜೋರಾಗಿದ್ದು, ಇಂದು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ 8 ಕಿ.ಮೀ. ವ್ಹೀಲ್ ಚೇರ್ ಮೂಲಕವೇ ಪಾದಯಾತ್ರೆ ನಡೆಸಿದರು. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಬಿಜೆಪಿ ಜಯಗಳಿಸಿದರೆ ಪ್ರತಿಯೊಬ್ಬರನ್ನೂ ಈ ರಾಜ್ಯದಿಂದ ಹೊರಹಾಕಲಿದೆ ಎಂದರು.

ಇದನ್ನೂ ಓದಿ : ಉಡುಪಿ : ಕುಟುಂಬ ಗುರುತಿನ ಚೀಟಿ ತಂತ್ರಾ0ಶದಲ್ಲಿ ಅಂಗವಿಕಲರ ನೋಂದಣಿಗೆ ಸೂಚನೆ -Vishwanews24

ಒಂದು ವೇಳೆ ನೀವು ಬಿಜೆಪಿಗೆ ಮತ ಹಾಕಿದರೆ ಅವರು ನಿಮ್ಮನ್ನು ರಾಜ್ಯದಿಂದಲೇ ಓಡಿಸುತ್ತಾರೆ. ಗೂಂಡಾಗಳನ್ನು ಇಟ್ಟುಕೊಂಡರೆ ಅವರು ಎಲ್ಲವನ್ನೂ ಹಿಡಿದಿಟ್ಟುಕೊಳ್ಳುತ್ತಾರೆ. ಬಂಗಾಳದ ಅಸ್ತಿತ್ವವನ್ನು ಸೆರೆಹಿಡಿಯುತ್ತಾರೆ. ಆದರೆ ಟಿಎಂಸಿಗೆ ಮತ ಹಾಕಿದರೆ ನಿಮ್ಮ ಮನೆ ಬಾಗಿಲಿಗೆ ಉಚಿತ ಪಡಿತರ ಬರಲಿದೆ ಎಂದು ಗುಡುಗಿದ್ದಾರೆ.

ಕ್ಷೇತ್ರದಲ್ಲಿ ಗೆದ್ದ ನಂತರ ನಂದಿಗ್ರಾಮದಲ್ಲಿ ಕಚೇರಿ ತೆರೆಯುತ್ತೇನೆ. ಈ ಆಟದಲ್ಲಿ ನಾವು ಗೆಲ್ಲಬೇಕು. ಬಿಜೆಪಿಯವರು ಗೂಂಡಾಗಿರಿ ಮಾಡಲು ಪ್ರಯತ್ನಿಸಿದರೆ ಪಾತ್ರೆ ಹಾಗೂ ಪೊರಕೆಗಳ ಮೂಲಕವೇ ಓಡಿಸಬೇಕು ಎಂದರು.

ಇದನ್ನೂ ಓದಿ :ರಾಜ್ಯದಲ್ಲಿ 15 ದಿನಗಳ ಕಾಲ ಯಾವುದೇ ಪ್ರತಿಭಟನೆ, ರಾಜಕೀಯ ರ‍್ಯಾಲಿ ಮತ್ತು ಮದುವೆ, ಸಮಾರಂಭ ನಡೆಸಲು ಅವಕಾಶ ಇಲ್ಲ : ಸಿಎಂ ಬಿಎಸ್ ವೈ -Vishwanews24

ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಅವರ ಭೂಮಿಯನ್ನು ಕದಿಯುತ್ತಿದ್ದಾರೆ. ಅವರ ಭೂಮಿ, ಪಶ್ಚಿಮ ಬಂಗಾಳ, ಪಶ್ಚಿಮ ಬಂಗಾಳದ ಸಂಸ್ಕøತಿಯನ್ನು ಲೂಟಿ ಮಾಡಲು ಬಿಡಬೇಡಿ. ಅಲ್ಲದೆ ನಮ್ಮ ತಾಯಿ, ಸಹೋದರಿಯರ ಗೌರವವನ್ನು ಹಾಳು ಮಾಡಲು ಬಿಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

7 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

7 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

8 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

8 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

8 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

11 hours ago