Featured

ಚುನಾವಣೆಯಲ್ಲಿ ಮಹಾಘಟಬಂಧನ ಸೋಲಿನ ಬಳಿಕ ಅಖಿಲೇಶ್ ಅವರು ಒಂದು ಕರೆ ಕೂಡಾ ಮಾಡಿಲ್ಲ : ಮಾಯಾವತಿ -Vishwanews24

ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಉತ್ತರ ಪ್ರದೇಶದಲ್ಲಿ ಹೀನಾಯ ಸೋಲು ಅನುಭವಿಸಿ ಒಂದು ತಿಂಗಳ ಬಳಿಕ, ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ತಮ್ಮ ಪಕ್ಷದ ಸಭೆಯಲ್ಲಿ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ವಿರುದ್ಧ ಕಿಡಿ ಕಾರಿದ್ದಾರೆ.

ರವಿವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಉಭಯ ಪಕ್ಷಗಳ ನಡುವಿನ ಹಳೆಯ ವೈಮನಸ್ಯವನ್ನು ಮತ್ತೆ ಕೆದಕಿದ ಮಾಯಾವತಿ, 17 ಕೋಟಿಯ ತಾಜ್ ಕಾರಿಡಾರ್ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ತಮ್ಮನ್ನು ಸಿಲುಕಿಸಲು ಪ್ರಯತ್ನಿಸಿದ್ದರು ಎಂದು ಆಪಾದಿಸಿದರು.

“ಚುನಾವಣೆಯಲ್ಲಿ ಮಹಾಘಟಬಂಧನ ಸೋಲಿನ ಬಳಿಕ ಅಖಿಲೇಶ್ ಅವರು ಒಂದು ಕರೆ ಕೂಡಾ ಮಾಡಿಲ್ಲ. ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರಾ ಅವರು ನನ್ನ ಜತೆ ಮಾತನಾಡುವಂತೆ ಅಖಿಲೇಶ್‌ಗೆ ಕೇಳಿಕೊಂಡಿದ್ದರು.

ಆದರೆ ಅದಕ್ಕೆ ಅವರು ಕಿವಿಗೊಡಲಿಲ್ಲ. ನಾನು ಅವರಿಗಿಂತ ಹಿರಿಯಳಾಗಿರುವುದರಿಂದ ನಾನೇ ಅವರಿಗೆ ಕರೆ ಮಾಡಿ ಅವರ ಕುಟುಂಬ ಸದಸ್ಯರು ಸೋತ ಬಗ್ಗೆ ಬೇಸರ ವ್ಯಕ್ತಪಡಿಸಿದ್ದೆ” ಎಂದು ವಿವರಿಸಿದರು.

ಈ ಮಹಾಮೈತ್ರಿಕೂಟ ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯಕ್ಕೆ ತಡೆ ಹಾಕುತ್ತದೆ ಎಂಬ ಭಾರೀ ನಿರೀಕ್ಷೆಯ ಹೊರತಾಗಿಯೂ 14 ಸ್ಥಾನಗಳನ್ನಷ್ಟೇ ಗೆಲ್ಲಲು ಸಾಧ್ಯವಾಗಿತ್ತು. ಬಿಜೆಪಿ 64 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಫಲಿತಾಂಶ ಪ್ರಕಟವಾದ ತಕ್ಷಣವೇ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿತ್ತು.

ಮುಸ್ಲಿಂ ಸಮುದಾಯದ ವಿರುದ್ಧ ಅಖಿಲೇಶ್ ಯಾದವ್ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದೂ ಬಿಎಸ್ಪಿ ನಾಯಕಿ ಆಪಾದಿಸಿದರು. “ನಾನು ಲೋಕಸಭಾ ಚುನಾವಣೆ ಟಿಕೆಟ್ ಹಂಚುತ್ತಿದ್ದಾಗ ಸತೀಶ್ ಮಿಶ್ರಾ ಅವರ ಮೂಲಕ ಅಖಿಲೇಶ್ ಸಂದೇಶ ರವಾನಿಸಿ, ಮತಗಳ ಧ್ರುವೀಕರಣ ತಡೆಯುವ ಸಲುವಾಗಿ ಮುಸ್ಲಿಮರಿಗೆ ಟಿಕೆಟ್ ನೀಡಬೇಡಿ ಎಂದು ಸಲಹೆ ಮಾಡಿದ್ದರು. ಆದರೆ ನಾನು ಅದಕ್ಕೆ ಒಪ್ಪಲಿಲ್ಲ” ಎಂದು ಮಾಯಾವತಿ ಹೇಳಿದರು.

ಅಖಿಲೇಶ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಯಾದವೇತರ ಹಿಂದುಳಿದ ವರ್ಗಗಳಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದರು. ಆದ್ದರಿಂದ ಜನ ನಮ್ಮ ಮೈತ್ರಿಕೂಟಕ್ಕೆ ಮತ ಹಾಕಲಿಲ್ಲ ಎಂದು ಆಪಾದಿಸಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago