Featured

ಚುನಾವಣೆಯಲ್ಲಿ ಮಹಾಘಟಬಂಧನ ಸೋಲಿನ ಬಳಿಕ ಅಖಿಲೇಶ್ ಅವರು ಒಂದು ಕರೆ ಕೂಡಾ ಮಾಡಿಲ್ಲ : ಮಾಯಾವತಿ -Vishwanews24

ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಉತ್ತರ ಪ್ರದೇಶದಲ್ಲಿ ಹೀನಾಯ ಸೋಲು ಅನುಭವಿಸಿ ಒಂದು ತಿಂಗಳ ಬಳಿಕ, ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ತಮ್ಮ ಪಕ್ಷದ ಸಭೆಯಲ್ಲಿ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ವಿರುದ್ಧ ಕಿಡಿ ಕಾರಿದ್ದಾರೆ.

ರವಿವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಉಭಯ ಪಕ್ಷಗಳ ನಡುವಿನ ಹಳೆಯ ವೈಮನಸ್ಯವನ್ನು ಮತ್ತೆ ಕೆದಕಿದ ಮಾಯಾವತಿ, 17 ಕೋಟಿಯ ತಾಜ್ ಕಾರಿಡಾರ್ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ತಮ್ಮನ್ನು ಸಿಲುಕಿಸಲು ಪ್ರಯತ್ನಿಸಿದ್ದರು ಎಂದು ಆಪಾದಿಸಿದರು.

“ಚುನಾವಣೆಯಲ್ಲಿ ಮಹಾಘಟಬಂಧನ ಸೋಲಿನ ಬಳಿಕ ಅಖಿಲೇಶ್ ಅವರು ಒಂದು ಕರೆ ಕೂಡಾ ಮಾಡಿಲ್ಲ. ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರಾ ಅವರು ನನ್ನ ಜತೆ ಮಾತನಾಡುವಂತೆ ಅಖಿಲೇಶ್‌ಗೆ ಕೇಳಿಕೊಂಡಿದ್ದರು.

ಆದರೆ ಅದಕ್ಕೆ ಅವರು ಕಿವಿಗೊಡಲಿಲ್ಲ. ನಾನು ಅವರಿಗಿಂತ ಹಿರಿಯಳಾಗಿರುವುದರಿಂದ ನಾನೇ ಅವರಿಗೆ ಕರೆ ಮಾಡಿ ಅವರ ಕುಟುಂಬ ಸದಸ್ಯರು ಸೋತ ಬಗ್ಗೆ ಬೇಸರ ವ್ಯಕ್ತಪಡಿಸಿದ್ದೆ” ಎಂದು ವಿವರಿಸಿದರು.

ಈ ಮಹಾಮೈತ್ರಿಕೂಟ ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯಕ್ಕೆ ತಡೆ ಹಾಕುತ್ತದೆ ಎಂಬ ಭಾರೀ ನಿರೀಕ್ಷೆಯ ಹೊರತಾಗಿಯೂ 14 ಸ್ಥಾನಗಳನ್ನಷ್ಟೇ ಗೆಲ್ಲಲು ಸಾಧ್ಯವಾಗಿತ್ತು. ಬಿಜೆಪಿ 64 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಫಲಿತಾಂಶ ಪ್ರಕಟವಾದ ತಕ್ಷಣವೇ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿತ್ತು.

ಮುಸ್ಲಿಂ ಸಮುದಾಯದ ವಿರುದ್ಧ ಅಖಿಲೇಶ್ ಯಾದವ್ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದೂ ಬಿಎಸ್ಪಿ ನಾಯಕಿ ಆಪಾದಿಸಿದರು. “ನಾನು ಲೋಕಸಭಾ ಚುನಾವಣೆ ಟಿಕೆಟ್ ಹಂಚುತ್ತಿದ್ದಾಗ ಸತೀಶ್ ಮಿಶ್ರಾ ಅವರ ಮೂಲಕ ಅಖಿಲೇಶ್ ಸಂದೇಶ ರವಾನಿಸಿ, ಮತಗಳ ಧ್ರುವೀಕರಣ ತಡೆಯುವ ಸಲುವಾಗಿ ಮುಸ್ಲಿಮರಿಗೆ ಟಿಕೆಟ್ ನೀಡಬೇಡಿ ಎಂದು ಸಲಹೆ ಮಾಡಿದ್ದರು. ಆದರೆ ನಾನು ಅದಕ್ಕೆ ಒಪ್ಪಲಿಲ್ಲ” ಎಂದು ಮಾಯಾವತಿ ಹೇಳಿದರು.

ಅಖಿಲೇಶ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಯಾದವೇತರ ಹಿಂದುಳಿದ ವರ್ಗಗಳಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದರು. ಆದ್ದರಿಂದ ಜನ ನಮ್ಮ ಮೈತ್ರಿಕೂಟಕ್ಕೆ ಮತ ಹಾಕಲಿಲ್ಲ ಎಂದು ಆಪಾದಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago