ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ ಊಹಾಪೋಹಗಳಿಗೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ತೆರೆ ಎಳೆದಿದ್ದಾರೆ. ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ ಎಂದು ಹೆಚ್ಡಿಕೆ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಲ್ಲಿ ನಾಯಕರೇ ನಿರ್ಧಾರ ಮಾಡಲು ಅಧಿಕಾರ ನೀಡಲಾಗಿದೆ. 2023ರ ಚುನಾವಣೆಗೆ ನಮ್ಮ ಪಕ್ಷಕ್ಕೆ ಅನುಕೂಲ ಆಗುವಂತೆ ನಿರ್ಧಾರ ಮಾಡಿ ಅಂತ ಹೇಳಿದ್ದೇನೆ. ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ. 2023ಕ್ಕೂ ಯಾರ ಜೊತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ. 224 ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕುತ್ತೇವೆ ಎಂದು ತಿಳಿಸಿದ್ದಾರೆ.
ಚುನಾವಣೆ ಪ್ರಚಾರದ ಅಂತ್ಯಕ್ಕೆ ಬಂದದ್ದೇವೆ. ಪರಿಷತ್ ಚುನಾವಣೆಗೆ ಜೆಡಿಎಸ್ ನಿಲುವಿನ ಬಗ್ಗೆ ಕುತೂಹಲ ಇದೆ. ಕಳೆದ ಒಂದು ವಾರದಿಂದ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಅಂತ ಊಹಾಪೋಹ, ಕಪೋಲಕಲ್ಪಿತ ಸುದ್ದಿ ಬಂದಿವೆ. ಕಾಂಗ್ರೆಸ್ ನಾಯಕರು ಚುನಾವಣೆ ಸಮಯದಲ್ಲಿ ಬಿಜೆಪಿ ʼಬಿʼ ಟೀಂ ಅಂತ ರಾಜಕೀಯ ಮಂತ್ರ ಪಠಣ ಮಾಡುತ್ತಿದ್ದಾರೆ. ದೇವರ ಮುಂದೆ ಜನ ಬೇರೆ ಮಂತ್ರ ಹೇಳುತ್ತಾರೆ. ಕಾಂಗ್ರೆಸ್ಸಿನವರು ಜೆಡಿಎಸ್ ʼಬಿʼ ಟೀಂ ಮತ್ತು ಕುಟುಂಬದ ಪಕ್ಷ ಅಂತ ಹೇಳುತ್ತಾರೆ. ಜೆಡಿಎಸ್ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ. ಉಳಿದ ಕಡೆ ಬಿಜೆಪಿ ಜೊತೆ ಹೋಗಿ ಕಾಂಗ್ರೆಸ್ ಸೋಲಿಸುತ್ತದೆ ಅಂತ ಚರ್ಚೆ ಆಗುತ್ತಿದೆ. ಕಾಂಗ್ರೆಸ್ಸಿನವರು ಜೆಡಿಎಸ್ ಬೆಂಬಲ ಅವಶ್ಯಕತೆ ಇಲ್ಲ ಅಂತ ಹೇಳಿದ್ದಾರೆ. ಜೆಡಿಎಸ್ ಧೂಳಿಪಟ ಆಗುತ್ತೆ ಎನ್ನುತ್ತಿದ್ದಾರೆ. ಕಾಂಗ್ರೆಸ್ ಆಗಲಿ ಅಥವಾ ಬಿಜೆಪಿಯಾಗಲಿ ನಮ್ಮ ಬೆಂಬಲ ಕೇಳಿಲ್ಲ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರು 2-3 ಬಾರಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಜೆಡಿಎಸ್ ಅಭ್ಯರ್ಥಿ ಇಲ್ಲದ ಕಡೆ ನಮ್ಮ ಅಭ್ಯರ್ಥಿಗೆ ಬೆಂಬಲ ಕೊಡಿ ಅಂತ ಮನವಿ ಮಾಡಿದ್ದಾರೆ. ಸಿಎಂ ಬೊಮ್ಮಾಯಿ ಅವರು ಪಕ್ಷಕ್ಕೂ ಅದಕ್ಕೂ ಸಂಬಂಧ ಇಲ್ಲ ಅಂತ ಹೇಳಿದ್ದಾರೆ. ಮಂಡ್ಯದಲ್ಲಿ ಮತ್ತೆ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಇದು ಬಿಜೆಪಿ-ಜೆಡಿಎಸ್ ಮೈತ್ರಿ ಅಲ್ಲ. ನಮಗೆ ಬೆಂಬಲ ಕೊಡಿ ಅಂತ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ನಾವು ಸ್ಪರ್ಧಿಸಿರುವ 6 ಕ್ಷೇತ್ರಗಳಲ್ಲೂ ತ್ರಿಕೋನ ಸ್ಪರ್ಧೆ ಇದೆ. ಇಲ್ಲಿ ಯಾರ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಎರಡು ರಾಷ್ಟ್ರೀಯ ಪಕ್ಷದ ಜೊತೆ ಹೋರಾಟ ಮಾಡುತ್ತಿದ್ದೇವೆ. ಅನೇಕ ಜಿಲ್ಲೆಯಲ್ಲಿ ನಮ್ಮ ಮತಗಳೇ ನಿರ್ಣಾಯಕ. ಇವತ್ತಿನ ಆರ್ಥಿಕ ವ್ಯವಸ್ಥೆ ಚುನಾವಣೆ ಹಿನ್ನೆಲೆ 6 ಕ್ಷೇತ್ರದಲ್ಲಿ ಮಾತ್ರ ನಾವು ಸ್ಪರ್ಧೆ ಮಾಡಿದ್ದೇವೆ ಎಂದಿದ್ದಾರೆ.
ಯಡಿಯೂರಪ್ಪ ಕೂಡಾ ನನ್ನ ಜೊತೆ ಕರೆ ಮಾಡಿ ಮಾತಾಡಿದ್ದಾರೆ. ಅದು ಅವರ ರಾಜಕೀಯ ಮುತ್ಸದ್ಧಿತನ ತೋರುತ್ತದೆ. ಅದರ ಬಗ್ಗೆ ನಾನು ಹಗುರವಾಗಿ ನಾನು ಮಾತಾನಾಡುವುದಿಲ್ಲ. ಆದರೆ ಪಕ್ಷದ ಮುಂದಿನ ಭವಿಷ್ಯದ ದೃಷ್ಟಿಯಿಂದ ಈ ತೀರ್ಮಾನ ಮಾಡಲಾಗಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕೆಲ ಕಡೆ ಬಿಜೆಪಿ, ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಬೇಕು. ಹೀಗಾಗಿ ಈ ನಿರ್ಧಾರ ಮಾಡಿದ್ದೇವೆ. ನಮ್ಮ ಅಭ್ಯರ್ಥಿಗೆ ಹಿನ್ನಡೆ ಆಗದಂತೆ ಈ ನಿರ್ಧಾರ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…
ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…