Featured

ಚುನಾವಣೆ ಆಯೋಗ ಮಲಗಿದೆ ಎಂದು ಆರೋಪಿಸಿ ರಸ್ತೆಯಲ್ಲಿ ಮಲಗಿ ವಿನೂತನವಾಗಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ – Vishwanews24

ಪರಿಷತ್ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ , ಚುನಾವಣೆ ಆಯೋಗ ಮಲಗಿದೆ ಎಂದು ಆರೋಪಿಸಿ ರಸ್ತೆಯಲ್ಲಿ ಮಲಗಿ ವಿನೂತನವಾಗಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ – Vishwanews24

ಮೈಸೂರು: ವಿಧಾನ ಪರಿಷತ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಶುಕ್ರವಾರ ಮತದಾನ ನಡೆಯಲಿದೆ. ಹೀಗಿರುವಾಗಲೇ ಪರಿಷತ್ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿದರು.

ಮೈಸೂರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ವಾಟಾಳ್ ನಾಗರಾಜ್, ಚುನಾವಣೆ ಆಯೋಗ ಮಲಗಿದೆ ಎಂದು ಆರೋಪಿಸಿ ರಸ್ತೆಯಲ್ಲಿ ಮಲಗಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಚುನಾವಣೆ ಹಣದ ಹೊಳೆ ಹರಿಯುತ್ತಿದೆ. ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದ್ದರೂ ಚುನಾವಣಾ ಆಯೋಗ ಮಲಗಿದೆ. ಚುನಾವಣ ಆಯೋಗದ ನೀತಿಯನ್ನು ಖಂಡಿಸುತ್ತೇನೆ ಎಂದರು.

ರಾಜಕೀಯ ಪಕ್ಷದವರು ಮತದಾರರಿಗೆ ಆಮಿಷವೊಡ್ಡುತ್ತಿದ್ದಾರೆ. ಇದು ನಿಲ್ಲದೆ ಹೋದರೆ ಪ್ರಜಾಪ್ರಭುತ್ವ ಉಳಿಯುವುದು ಹೇಗೆ. ಇದು ನಿಲ್ಲಬೇಕು. ಇದಕ್ಕೆಲ್ಲ ಕಡಿವಾಣ ಹಾಕಲು ಹೊಸ ಚುನಾವಣಾ ಕಾಯ್ದೆ ಜಾರಿಯಾಗಬೇಕು ಎಂದು ಆಗ್ರಹಿಸಿದರು.

ಚುನಾವಣಾ ಆಯೋಗ ಭ್ರಷ್ಟಾಚಾರವನ್ನ ತಡೆಹಿಡಿಯಬೇಕು . ಹಿಂದೆಂದಿಗಿಂತಲೂ ಈ ಸಲ ಪರಿಷತ್ ಎಲೆಕ್ಷನ್‌ನಲ್ಲಿ ಸಿಕ್ಕಾಪಟ್ಟೆ ಹಣ ಖರ್ಚು ಮಾಡಲಾಗುತ್ತಿದೆ. ಚುನಾವಣಾ ಆಯೋಗ ಹದ್ದಿನಕಣ್ಣು ವಹಿಸಬೇಕು . ರಾಜಕೀಯ ಪಕ್ಷಗಳು ಹಣಬಲ ಇರುವವರಿಗೆ ಮಾತ್ರ ಅವಕಾಶ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ವಾಟಾಳ್ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತಿ ಸದಸ್ಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ನೀಡುತ್ತಿರುವ ಗೌರವ ಧನ ಸಾಕಾಗುತ್ತಿಲ್ಲ. ಮತಗಳನ್ನು ಕೆಲ ಅಭ್ಯರ್ಥಿಗಳು ಖರೀದಿ ಮಾಡುತ್ತಿದ್ದಾರೆ. ದಯಮಾಡಿ ಮತದಾರರು ಆಸೆ ಆಮಿಷಗಳಿಗೆ ಬಲಿಯಾಗಬೇಡಿ. ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಿ ಅಕ್ರಮ ತಡೆಯಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು. ಇತ್ತೀಚಿನ ವರ್ಷಗಳಲ್ಲಿ ನೈತಿಕ ರಾಜಕಾರಣ ಮರೆಯಾಗುತ್ತಿದೆ. ಹಣಬಲ ಇದ್ದವರು ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ . ಇದೆಲ್ಲವೂ ಭವಿಷ್ಯಕ್ಕೆ ಮಾರಕವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

 

Vishwa News 24

Recent Posts

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

2 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

2 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

3 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

3 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

19 hours ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

1 day ago