ಚಿಕ್ಕಮಗಳೂರು : ಚುನಾವಣೆ ಫಲಿತಾಂಶ ಏನೇ ಬರಲಿ ಮಲ್ಪೆಯಲ್ಲಿ ನಾಪತ್ತೆಯಾಗಿರುವ ಮೀನುಗಾರರನ್ನು ಪತ್ತೆ ಹಚ್ಚಿಕೊಡಿ ಎಂದು ನಾನು ನ್ಯಾಯಾಲಯದ ಮೊರೆ ಹೋಗುವುದಾಗಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಧುನಿಕ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದರೂ ಇತ್ತೀಚೆಗೆ ಮಲ್ಪೆಯಲ್ಲಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್ ಮತ್ತು 7 ಮಂದಿ ಮೀನುಗಾರರನ್ನು 100 ದಿನ ಕಳೆದರೂ ಹುಡುಕದಿರುವುದು ದುರಾದೃಷ್ಟಕರ. ಈ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಅವರು ತಿಳಿಸಿದರು.
ತಾವು ಸಂಸದನಾಗಿ ಆಯ್ಕೆಯಾದಲ್ಲಿ ಉಡುಪಿ ಜಿಲ್ಲೆಯ ಮರಳಿನ ಸಮಸ್ಯೆ ಪರಿಹರಿಸುತ್ತೇನೆ. ಯುವ ಜನಾಂಗ ಎರಡೂ ಜಿಲ್ಲೆಯಲ್ಲಿ ಉದ್ಯೋಗ ಅರಸಿ ಗುಳೆ ಹೋಗುತ್ತಿದ್ದು ಊರುಗಳು ವೃದ್ಧಾಶ್ರಮಗಳಾಗುತ್ತಿವೆ. ಆಯಾ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿ ಮಾಡುವ ಉದ್ದೇಶದಿಂದ ಸಾಫ್ಟ್ವೇರ್ ಪಾರ್ಕ್ ಮತ್ತಿತರೆ ಉದ್ದಿಮೆ ಸ್ಥಾಪಿಸಲಾಗುವುದು ಎಂದರು.
ದೇಶದಲ್ಲಿ ಕನಿಷ್ಠ ಸಾವಿರಾರು ರೂ. ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದರೆ, ಸಾವಿರಾರು ಕೋಟಿ ರೂ.ಸಾಲ ತೀರಿಸದೆ ಶ್ರೀಮಂತ ಉದ್ಯಮಿಗಳು ವಿದೇಶಕ್ಕೆ ಪಲಾಯನ ಮಾಡಿ ಅಲ್ಲಿ ನೆಮ್ಮದಿಯಾಗಿ ಬದುಕುತ್ತಿದ್ದಾರೆ. ಇದನ್ನು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ, ಅಡಕೆ ಮತ್ತು ಕಾಫಿ ಬೆಳೆ ಹಾಗೂ ಕುದುರೆಮುಖ ಕಾರ್ಮಿಕರ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲಾಗುವುದು. ರಾಷ್ಟ್ರೀಯ ಹೆದ್ದಾರಿ, ಟೋಲ್ಗೇಟ್, ಸಿಆರ್ಜೆಡ್ ಬಗ್ಗೆ ಸಂಸತ್ತಿನಲ್ಲಿ ನ್ಯಾಯೋಚಿತ ಹೋರಾಟ ಮಾಡಲಾಗುವುದು. ಉಡುಪಿ ಮತ್ತು ಚಿಕ್ಕಮಗಳೂರು ಅದ್ಭುತ ಪ್ರವಾಸಿ ತಾಣಗಳಾಗಿದ್ದು ಅವುಗಳನ್ನು ವಿಶ್ವವಿಖ್ಯಾತ ಪ್ರವಾಸಿ ತಾಣಗಳನ್ನಾಗಿ ರೂಪಿಸುವ ಯೋಜನೆ ತಂದು ಜಿಲ್ಲೆಗಳ ಆರ್ಥಿಕ ಸ್ಥಿತಿ ಉತ್ತಮ ಪಡಿಸಲಾಗುವುದು ಎಂದು ಹೇಳಿದರು.
ಮುಖಂಡರಾದ ಅನಿತಾಡಿಸೋಜ, ಪ್ರಶಾಂತ್ ಕುಂದರ್, ಹನೀಫ್, ವರದರಾಜು ಹಾಜರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…