ಕಲಬುರಗಿ: ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಾಯ್ತಿ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ. ದಿ.ರಾಜೀವ್ಗಾಂಧಿ ಅವರು ಪಂಚಾಯ್ತಿ ವ್ಯವಸ್ಥೆಯಲ್ಲಿ ಮೀಸಲಾತಿ ಜಾರಿಗೆ ತಂದರು. ಆದರೆ ಸಂವಿಧಾನದಲ್ಲಿ ಮೀಸಲಾತಿ ತಿದ್ದುಪಡಿ ಪ್ರಶ್ನಿಸಿ ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು. ಬಿಜೆಪಿ ಅವರಿಗೆ ಮೀಸಲಾತಿ ಬಗ್ಗೆ ಆಸಕ್ತಿ ಇಲ್ಲ, ರಾಮಜೋಯಿಸ್ ರಿಟ್ ಪಿಟಿಷನ್ ಹಾಕಿದ್ದರು. ಬಿಜೆಪಿ ಬಂದ ಮೇಲೆ ಪಂಚಾಯತ್ ರಾಜ್ಯ ವ್ಯವಸ್ಥೆ ಬಿಜೆಪಿಯಿಂದ ಕೈತಪ್ಪಿದೆ ಎಂದು ಕಿಡಿಕಾರಿದರು.
ಸರ್ಕಾರ ಪಂಚಾಯ್ತಿ ಎಲೆಕ್ಷನ್ ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ನಡೆಸಬೇಕು. ಚುನಾವಣೆ ವಿಚಾರದಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಕ್ಷೇತ್ರಗಳ ಪುನರ್ ವಿಂಗಡನೆ ಮಾಡಲು ಸರ್ಕಾರ ಮುಂದಾಗಿದ್ದು, ಚುನಾವಣೆ ಮುಂದೂಡಲು ಹುನ್ನಾರ ನಡೆಸಿದೆ. ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಮುಂದೂಡಲು ಸರ್ಕಾರ ಪ್ಲಾನ್ ಮಾಡಿದೆ. ಆದರೆ ಹೈಕೋರ್ಟ್ ತೀರ್ಪಿನ ಅನ್ವಯ ಚುನಾವಣೆ ನಡೆಯಬೇಕು ಎಂದು ಆಗ್ರಹಿಸಿದರು.
ಸರ್ಕಾರದ ಸಾಧನೆ ಕೇವಲ ಪತ್ರಿಕೆಗಳಲ್ಲಿ ಮಾತ್ರ. ಜಿಲ್ಲೆಗೆ ಇದುವರೆಗೆ ಒಂದು ಉಸ್ತುವಾರಿ ಸಚಿವ ಸ್ಥಾನ ಸರ್ಕಾರ ನೀಡಿಲ್ಲ. ಬಿಜೆಪಿ ಏನೇ ಕುತಂತ್ರ ನಡೆಸಿದ್ರು ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕಟ್ಟಿಟ್ಟ ಬುತ್ತಿಯಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಅಧಿಕಾರವಧಿಯಲ್ಲಿ ಏನೇನು ಕೆಲಸ ಮಾಡಿಲ್ಲ. ನಮ್ಮ ಅಭ್ಯರ್ಥಿ ಪಂಚಾಯ್ತಿ ರಾಜ್ ವ್ಯವಸ್ಥೆಯಿಂದ ಬಂದವರು, ಬಿಜೆಪಿ ಅಭ್ಯರ್ಥಿ ವ್ಯಾಪಾರದ ಹಿನ್ನೆಲೆಯಿಂದ ಬಂದವರು. ಅವರಿಗೆ ಪಂಚಾಯತ್ ರಾಜ್ ವ್ಯವಸ್ಥೆ ಬಗ್ಗೆ ಅರಿವಿಲ್ಲ ಎಂದು ಆರೋಪಿಸಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…