ಕಲಬುರಗಿ: ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಾಯ್ತಿ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ. ದಿ.ರಾಜೀವ್ಗಾಂಧಿ ಅವರು ಪಂಚಾಯ್ತಿ ವ್ಯವಸ್ಥೆಯಲ್ಲಿ ಮೀಸಲಾತಿ ಜಾರಿಗೆ ತಂದರು. ಆದರೆ ಸಂವಿಧಾನದಲ್ಲಿ ಮೀಸಲಾತಿ ತಿದ್ದುಪಡಿ ಪ್ರಶ್ನಿಸಿ ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು. ಬಿಜೆಪಿ ಅವರಿಗೆ ಮೀಸಲಾತಿ ಬಗ್ಗೆ ಆಸಕ್ತಿ ಇಲ್ಲ, ರಾಮಜೋಯಿಸ್ ರಿಟ್ ಪಿಟಿಷನ್ ಹಾಕಿದ್ದರು. ಬಿಜೆಪಿ ಬಂದ ಮೇಲೆ ಪಂಚಾಯತ್ ರಾಜ್ಯ ವ್ಯವಸ್ಥೆ ಬಿಜೆಪಿಯಿಂದ ಕೈತಪ್ಪಿದೆ ಎಂದು ಕಿಡಿಕಾರಿದರು.
ಸರ್ಕಾರ ಪಂಚಾಯ್ತಿ ಎಲೆಕ್ಷನ್ ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ನಡೆಸಬೇಕು. ಚುನಾವಣೆ ವಿಚಾರದಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಕ್ಷೇತ್ರಗಳ ಪುನರ್ ವಿಂಗಡನೆ ಮಾಡಲು ಸರ್ಕಾರ ಮುಂದಾಗಿದ್ದು, ಚುನಾವಣೆ ಮುಂದೂಡಲು ಹುನ್ನಾರ ನಡೆಸಿದೆ. ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಮುಂದೂಡಲು ಸರ್ಕಾರ ಪ್ಲಾನ್ ಮಾಡಿದೆ. ಆದರೆ ಹೈಕೋರ್ಟ್ ತೀರ್ಪಿನ ಅನ್ವಯ ಚುನಾವಣೆ ನಡೆಯಬೇಕು ಎಂದು ಆಗ್ರಹಿಸಿದರು.
ಸರ್ಕಾರದ ಸಾಧನೆ ಕೇವಲ ಪತ್ರಿಕೆಗಳಲ್ಲಿ ಮಾತ್ರ. ಜಿಲ್ಲೆಗೆ ಇದುವರೆಗೆ ಒಂದು ಉಸ್ತುವಾರಿ ಸಚಿವ ಸ್ಥಾನ ಸರ್ಕಾರ ನೀಡಿಲ್ಲ. ಬಿಜೆಪಿ ಏನೇ ಕುತಂತ್ರ ನಡೆಸಿದ್ರು ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕಟ್ಟಿಟ್ಟ ಬುತ್ತಿಯಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಅಧಿಕಾರವಧಿಯಲ್ಲಿ ಏನೇನು ಕೆಲಸ ಮಾಡಿಲ್ಲ. ನಮ್ಮ ಅಭ್ಯರ್ಥಿ ಪಂಚಾಯ್ತಿ ರಾಜ್ ವ್ಯವಸ್ಥೆಯಿಂದ ಬಂದವರು, ಬಿಜೆಪಿ ಅಭ್ಯರ್ಥಿ ವ್ಯಾಪಾರದ ಹಿನ್ನೆಲೆಯಿಂದ ಬಂದವರು. ಅವರಿಗೆ ಪಂಚಾಯತ್ ರಾಜ್ ವ್ಯವಸ್ಥೆ ಬಗ್ಗೆ ಅರಿವಿಲ್ಲ ಎಂದು ಆರೋಪಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…