Featured

ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ : ಪ್ರಿಯಾಂಕ್ ಖರ್ಗೆ – Vishwanews24

ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ : ಪ್ರಿಯಾಂಕ್ ಖರ್ಗೆ – Vishwanews24

ಕಲಬುರಗಿ: ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಾಯ್ತಿ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ. ದಿ.ರಾಜೀವ್‍ಗಾಂಧಿ ಅವರು ಪಂಚಾಯ್ತಿ ವ್ಯವಸ್ಥೆಯಲ್ಲಿ ಮೀಸಲಾತಿ ಜಾರಿಗೆ ತಂದರು. ಆದರೆ ಸಂವಿಧಾನದಲ್ಲಿ ಮೀಸಲಾತಿ ತಿದ್ದುಪಡಿ ಪ್ರಶ್ನಿಸಿ ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು. ಬಿಜೆಪಿ ಅವರಿಗೆ ಮೀಸಲಾತಿ ಬಗ್ಗೆ ಆಸಕ್ತಿ ಇಲ್ಲ, ರಾಮಜೋಯಿಸ್ ರಿಟ್ ಪಿಟಿಷನ್ ಹಾಕಿದ್ದರು. ಬಿಜೆಪಿ ಬಂದ ಮೇಲೆ ಪಂಚಾಯತ್ ರಾಜ್ಯ ವ್ಯವಸ್ಥೆ ಬಿಜೆಪಿಯಿಂದ ಕೈತಪ್ಪಿದೆ ಎಂದು ಕಿಡಿಕಾರಿದರು.

ಸರ್ಕಾರ ಪಂಚಾಯ್ತಿ ಎಲೆಕ್ಷನ್ ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ನಡೆಸಬೇಕು. ಚುನಾವಣೆ ವಿಚಾರದಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಕ್ಷೇತ್ರಗಳ ಪುನರ್ ವಿಂಗಡನೆ ಮಾಡಲು ಸರ್ಕಾರ ಮುಂದಾಗಿದ್ದು, ಚುನಾವಣೆ ಮುಂದೂಡಲು ಹುನ್ನಾರ ನಡೆಸಿದೆ. ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಮುಂದೂಡಲು ಸರ್ಕಾರ ಪ್ಲಾನ್ ಮಾಡಿದೆ. ಆದರೆ ಹೈಕೋರ್ಟ್ ತೀರ್ಪಿನ ಅನ್ವಯ ಚುನಾವಣೆ ನಡೆಯಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಸಾಧನೆ ಕೇವಲ ಪತ್ರಿಕೆಗಳಲ್ಲಿ ಮಾತ್ರ. ಜಿಲ್ಲೆಗೆ ಇದುವರೆಗೆ ಒಂದು ಉಸ್ತುವಾರಿ ಸಚಿವ ಸ್ಥಾನ ಸರ್ಕಾರ ನೀಡಿಲ್ಲ. ಬಿಜೆಪಿ ಏನೇ ಕುತಂತ್ರ ನಡೆಸಿದ್ರು ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕಟ್ಟಿಟ್ಟ ಬುತ್ತಿಯಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಅಧಿಕಾರವಧಿಯಲ್ಲಿ ಏನೇನು ಕೆಲಸ ಮಾಡಿಲ್ಲ. ನಮ್ಮ ಅಭ್ಯರ್ಥಿ ಪಂಚಾಯ್ತಿ ರಾಜ್ ವ್ಯವಸ್ಥೆಯಿಂದ ಬಂದವರು, ಬಿಜೆಪಿ ಅಭ್ಯರ್ಥಿ ವ್ಯಾಪಾರದ ಹಿನ್ನೆಲೆಯಿಂದ ಬಂದವರು. ಅವರಿಗೆ ಪಂಚಾಯತ್ ರಾಜ್ ವ್ಯವಸ್ಥೆ ಬಗ್ಗೆ ಅರಿವಿಲ್ಲ ಎಂದು ಆರೋಪಿಸಿದರು.

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

6 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

6 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

7 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

7 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

7 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

7 hours ago