ಹೊಸಪೇಟೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.
ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು, ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…