ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರವು ಮತಾಂತರ ಕಾಯ್ದೆಯನ್ನು ಜಾರಿಗೊಳಿಸುವ ಹುನ್ನಾರ ನಡೆಸಿದ್ದು, ಇದನ್ನು ಕಾಂಗ್ರೆಸ್ ಶತಾಯಗತಾಯ ವಿರೋಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಖಾಸಗಿಯಾಗಿ ಹಾಗೂ ಸರ್ಕಾರಿ ವತಿಯಿಂದ ಮಸೂದೆ ಮಂಡನೆ ಮಾಡುವ ತಂತ್ರಗಾರಿಕೆಯನ್ನು ಬಿಜೆಪಿ ಅನುಸರಿಸುತ್ತಿದ್ದು, ಅವರು ಯಾವುದೇ ರೂಪದಲ್ಲಿ ಮಸೂದೆ ತಂದರೂ ನಾವು ವಿರೋಧಿಸುತ್ತೇವೆ” ಎಂದರು.
ಇನ್ನು ಮತಾಂತರ ನಿಷೇಧ ಕಾಯ್ದೆ ಕೇವಲ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ವಿದೇಶದಲ್ಲೂ ಇದು ಚರ್ಚೆಯಾಗುತ್ತಿದ್ದು, ರಾಜ್ಯ ಸರ್ಕಾರದ ನಡವಳಿಕೆಗಳ ಬಗ್ಗೆ ಆಕ್ಷೇಪಗಳು ಕೇಳಿಬರುತ್ತಿವೆ” ಎಂದಿದ್ದಾರೆ.
ಮತಾಂತರ ನಿಷೇಧ ಕಾಯ್ದೆಯಿಂದ ಅಭಿವೃದ್ಧಿಗೆ ಏನಾದರೂ ಸಂಬಂಧವಿದೆಯೇ? ಎಂದು ಪ್ರಶ್ನಿಸಿರುವ ಅವರು, ಚುನಾವಣೆ ಕಾರಣಕ್ಕಾಗಿ ಮಸೂದೆ ತರುವ ಬಿಜೆಪಿ ಹುನ್ನಾರ ಖಂಡನೀಯ ಎಂದು ಹೇಳಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…