Featured

ಚುನಾವಣೆ ಸೋಲುವ ಆತಂಕದಿಂದ ಈ ರೀತಿ ಹೇಳಿಕೆ , ರಾಜ್ಯದ ಜನರೇ ಇವರಿಗೆ ಉತ್ತರವನ್ನೂ ಕೊಡ್ತಾರೆ  : ಅಶ್ವತ್ಥನಾರಾಯಣ ವಿರುದ್ಧ ಯು. ಟಿ ಖಾದರ್ ವಾಗ್ದಾಳಿ – Vishwanews2

ಸಿದ್ದರಾಮಯ್ಯ ಅವರ ವಿರುದ್ಧದ ಹೇಳಿಕೆಗೆ ಅಶ್ವತ್ಥನಾರಾಯಣ ವಿರುದ್ಧ ಯು.ಟಿ.ಖಾದರ್‌ ಕಿಡಿ

ಅಶ್ವತ್ಥ ನಾರಾಯಣ ಬಿಜೆಪಿಯದ್ದು ಮೀರ್ ಸಾದಿಕ್, ಗೋಡ್ಸೆ ವಂಶ..

ಗಾಂಧೀಜಿಯನ್ನು ಕೊಂದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ..

ಬೆಂಗಳೂರು:ಅಶ್ವತ್ಥ ನಾರಾಯಣ, ಬಿಜೆಪಿಯದ್ದು ಮೀರ್ ಸಾದಿಕ್ ವಂಶ ಎಂದು ಪ್ರತಿಪಕ್ಷದ ಉಪನಾಯಕ ಯು. ಟಿ ಖಾದರ್ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಟಿಪ್ಪು ರೀತಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆಯಬೇಕು ಎಂಬ ಸಚಿವ ಅಶ್ವತ್ಥ ನಾರಾಯಣ ಹೇಳಿಕೆಗೆ ತಿರುಗೇಟು ನೀಡಿದರು.

ನೇರಾ ನೇರವಾಗಿ ಹೋರಾಟ ಮಾಡುವ ಹಾಗೂ ಚರ್ಚೆ ಮಾಡುವ ಧೈರ್ಯ ಇವರಿಗೆ ಇಲ್ಲ. ಗಾಂಧೀಜಿಯನ್ನು ಕೊಂದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಗೋಡ್ಸೆ ವಂಶಸ್ಥರು ಅಶ್ವತ್ಥ ನಾರಾಯಣ. ಇವರು ಹೊಡೆದುಹಾಕಲು ನೋಡಿದರೆ ಕಾಂಗ್ರೆಸ್ ನಾಯಕರನ್ನು ಜನರೇ ಮೂರನೇ ಮಹಡಿಗೆ ತಂದು ಕೂರಿಸ್ತಾರೆ. ರಾಜ್ಯದ ಜನರೇ ಇವರಿಗೆ ಉತ್ತರವನ್ನೂ ಕೊಡ್ತಾರೆ ಎಂದರು.

ಅಶ್ವಥ್ ನಾರಾಯಣ್ ನಳಿನ್ ಕುಮಾರ್ ಕಟೀಲು ಹಾಗೂ ಅವರ ಕಂಪನಿಗೆ ಆತಂಕ ಇದೆ. ರಾಜ್ಯದಲ್ಲಿ ಬಿಜೆಪಿ ಎದುರಿಸುತ್ತಿರುವ ಆತಂಕ ಈ ರೀತಿ ಅವರ ಬಾಯಲ್ಲಿ ಹೊರಬಂದಿದೆ. ನಾಯಕರ ಮಾತುಗಳಲ್ಲಿ ಆತಂಕ ಮೂಡಿಬರುತ್ತಿದೆ. ಮುಂದಿನ 50 ರಿಂದ 60 ದಿನಗಳಲ್ಲಿ ಎದುರಾಗುವ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಆತಂಕ ಇದೆ ಎಂದರು.

ಈ ಹಿನ್ನೆಲೆಯಲ್ಲಿ ಇಂತಹ ಪದಗಳನ್ನು ಬಳಸಿ ಮಾತನಾಡುತ್ತಿದ್ದಾರೆ. ಇದು ಅವರ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ. ರಾಜ್ಯದ ಜನರ ಗಮನವನ್ನು ಬೇರೆ ಸೆಳೆಯುವ ಪ್ರಯತ್ನವಾಗಿದೆ. ರಾಜ್ಯ ಸರ್ಕಾರ ಯಾವುದೇ ರೀತಿಯಲ್ಲೂ ಜನಪರ ಆಡಳಿತ ನೀಡಿಲ್ಲ. ಕಾಂಗ್ರೆಸ್ ಪಕ್ಷ 200 ಯೂನಿಟ್ ಫ್ರೀ ವಿದ್ಯುತ್ ನೀಡಿಕೆ,‌ ಮಹಿಳೆಯರಿಗೆ ಎರಡು ಸಾವಿರ ರೂಪಾಯಿ ಗೌರವ ಧನ ನೀಡುವ ಪ್ರಸ್ತಾಪವನ್ನು ಮಾಡಿರುವುದು ಸಹ ಬಿಜೆಪಿಯವರಿಗೆ ಆತಂಕ ತರಿಸಿದೆ ಎಂದು ಆರೋಪಿಸಿದರು‌.

ನಾವು ಅಶ್ವಥ್ ನಾರಾಯಣ್ ನಳೀನ್ ಕುಮಾರ್ ಕಟೀಲ್, ಬಸವರಾಜ್ ಬೊಮ್ಮಾಯಿ ಹಾಗೂ ಇತರೆ ಬಿಜೆಪಿ ನಾಯಕರನ್ನು ಪ್ರೀತಿಸುತ್ತೇವೆ ಮತ್ತು ಗೌರವಿಸುತ್ತೇವೆ. ಅವರು ಇದೇ ರೀತಿ ಮಾತನಾಡಿಕೊಂಡು ಹೋಗಲಿ ಬಿಡಿ ಎಂದರು.

ಮಂಡ್ಯದಲ್ಲಿ ನಡೆದ ಕಾರ್ಯಕ್ರದಲ್ಲಿ ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಎಂದು ಸಚಿವ ಅಶ್ವತ್ಥನಾರಾಯಣ ಅವರು ಹೇಳಿಕೆ ನೀಡಿದ್ದರು. ಇದರು ಕಾಂಗ್ರೆಸ್‌f ನಾಯಕರ ಮತ್ತು ಸಿದ್ದರಾಮಯ್ಯ ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಸಚಿವ ಅಶ್ವತ್ಥನಾರಾಯಣ ವಿರುದ್ಧ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಈ ಬೆನ್ನೆಲೆ ಸಚಿವರು ಕೂಡಾ ಸಿದ್ದರಾಮಯ್ಯ ಅವರ ಕ್ಷಮೆ ಕೇಳಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

26 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

23 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

23 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

24 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago