ಬೆಂಗಳೂರು:ಅಶ್ವತ್ಥ ನಾರಾಯಣ, ಬಿಜೆಪಿಯದ್ದು ಮೀರ್ ಸಾದಿಕ್ ವಂಶ ಎಂದು ಪ್ರತಿಪಕ್ಷದ ಉಪನಾಯಕ ಯು. ಟಿ ಖಾದರ್ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಟಿಪ್ಪು ರೀತಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆಯಬೇಕು ಎಂಬ ಸಚಿವ ಅಶ್ವತ್ಥ ನಾರಾಯಣ ಹೇಳಿಕೆಗೆ ತಿರುಗೇಟು ನೀಡಿದರು.
ನೇರಾ ನೇರವಾಗಿ ಹೋರಾಟ ಮಾಡುವ ಹಾಗೂ ಚರ್ಚೆ ಮಾಡುವ ಧೈರ್ಯ ಇವರಿಗೆ ಇಲ್ಲ. ಗಾಂಧೀಜಿಯನ್ನು ಕೊಂದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಗೋಡ್ಸೆ ವಂಶಸ್ಥರು ಅಶ್ವತ್ಥ ನಾರಾಯಣ. ಇವರು ಹೊಡೆದುಹಾಕಲು ನೋಡಿದರೆ ಕಾಂಗ್ರೆಸ್ ನಾಯಕರನ್ನು ಜನರೇ ಮೂರನೇ ಮಹಡಿಗೆ ತಂದು ಕೂರಿಸ್ತಾರೆ. ರಾಜ್ಯದ ಜನರೇ ಇವರಿಗೆ ಉತ್ತರವನ್ನೂ ಕೊಡ್ತಾರೆ ಎಂದರು.
ಅಶ್ವಥ್ ನಾರಾಯಣ್ ನಳಿನ್ ಕುಮಾರ್ ಕಟೀಲು ಹಾಗೂ ಅವರ ಕಂಪನಿಗೆ ಆತಂಕ ಇದೆ. ರಾಜ್ಯದಲ್ಲಿ ಬಿಜೆಪಿ ಎದುರಿಸುತ್ತಿರುವ ಆತಂಕ ಈ ರೀತಿ ಅವರ ಬಾಯಲ್ಲಿ ಹೊರಬಂದಿದೆ. ನಾಯಕರ ಮಾತುಗಳಲ್ಲಿ ಆತಂಕ ಮೂಡಿಬರುತ್ತಿದೆ. ಮುಂದಿನ 50 ರಿಂದ 60 ದಿನಗಳಲ್ಲಿ ಎದುರಾಗುವ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಆತಂಕ ಇದೆ ಎಂದರು.
ಈ ಹಿನ್ನೆಲೆಯಲ್ಲಿ ಇಂತಹ ಪದಗಳನ್ನು ಬಳಸಿ ಮಾತನಾಡುತ್ತಿದ್ದಾರೆ. ಇದು ಅವರ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ. ರಾಜ್ಯದ ಜನರ ಗಮನವನ್ನು ಬೇರೆ ಸೆಳೆಯುವ ಪ್ರಯತ್ನವಾಗಿದೆ. ರಾಜ್ಯ ಸರ್ಕಾರ ಯಾವುದೇ ರೀತಿಯಲ್ಲೂ ಜನಪರ ಆಡಳಿತ ನೀಡಿಲ್ಲ. ಕಾಂಗ್ರೆಸ್ ಪಕ್ಷ 200 ಯೂನಿಟ್ ಫ್ರೀ ವಿದ್ಯುತ್ ನೀಡಿಕೆ, ಮಹಿಳೆಯರಿಗೆ ಎರಡು ಸಾವಿರ ರೂಪಾಯಿ ಗೌರವ ಧನ ನೀಡುವ ಪ್ರಸ್ತಾಪವನ್ನು ಮಾಡಿರುವುದು ಸಹ ಬಿಜೆಪಿಯವರಿಗೆ ಆತಂಕ ತರಿಸಿದೆ ಎಂದು ಆರೋಪಿಸಿದರು.
ನಾವು ಅಶ್ವಥ್ ನಾರಾಯಣ್ ನಳೀನ್ ಕುಮಾರ್ ಕಟೀಲ್, ಬಸವರಾಜ್ ಬೊಮ್ಮಾಯಿ ಹಾಗೂ ಇತರೆ ಬಿಜೆಪಿ ನಾಯಕರನ್ನು ಪ್ರೀತಿಸುತ್ತೇವೆ ಮತ್ತು ಗೌರವಿಸುತ್ತೇವೆ. ಅವರು ಇದೇ ರೀತಿ ಮಾತನಾಡಿಕೊಂಡು ಹೋಗಲಿ ಬಿಡಿ ಎಂದರು.
ಮಂಡ್ಯದಲ್ಲಿ ನಡೆದ ಕಾರ್ಯಕ್ರದಲ್ಲಿ ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಎಂದು ಸಚಿವ ಅಶ್ವತ್ಥನಾರಾಯಣ ಅವರು ಹೇಳಿಕೆ ನೀಡಿದ್ದರು. ಇದರು ಕಾಂಗ್ರೆಸ್f ನಾಯಕರ ಮತ್ತು ಸಿದ್ದರಾಮಯ್ಯ ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಸಚಿವ ಅಶ್ವತ್ಥನಾರಾಯಣ ವಿರುದ್ಧ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಈ ಬೆನ್ನೆಲೆ ಸಚಿವರು ಕೂಡಾ ಸಿದ್ದರಾಮಯ್ಯ ಅವರ ಕ್ಷಮೆ ಕೇಳಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…