ಬೆಂಗಳೂರು: ಮೋದಿಯವರು ಅಭಿವೃದ್ಧಿಪರ ಆಡಳಿತ ಕೊಡಲಿಲ್ಲ. ಮೋದಿಯವರು ಪ್ರಚಾರದಲ್ಲೇ ಆಡಳಿತ ಮಾಡಿದ್ದಾರೆ. ಸಾಕಷ್ಟು ಸಮಸ್ಯೆಗಳಿದ್ದರೂ ಅವರಿಗೆ ಇಷ್ಟೊಂದು ಅಂಕಿ ಸಂಖ್ಯೆ ತೋರಿಸುತ್ತಿರೋದು ಆಶ್ಚರ್ಯವಾಗುತ್ತಿದೆ. ಎಷ್ಟೋ ಎಕ್ಸಿಟ್ ಪೋಲ್ಗಳು ನಿಜವಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಈ ಸಮೀಕ್ಷೆಗಳು ತೋರಿಸಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ನಾವು ಪಡೆಯುತ್ತೇವೆ. ಎರಡೂ ಪಕ್ಷಗಳು ಇನ್ನೂ ಚೆನ್ನಾಗಿ ಕೆಲಸ ಮಾಡಿದರೆ ಇನ್ನೂ ಹೆಚ್ಚಾಗಿ ಸೀಟುಗಳನ್ನು ಗೆಲ್ಲಬಹುದಿತ್ತು. ಈ ಸಮೀಕ್ಷೆಗಳನ್ನು ನಾನು ಒಪ್ಪಲ್ಲ. 23 ರ ತನಕ ಕಾಯೋಣ. ಆವತ್ತು ನಿಜವಾದ ಸಮೀಕ್ಷೆ ಬರುತ್ತೆ. ನಾವು ರಾಜ್ಯದಲ್ಲೂ, ದೇಶದಲ್ಲೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕದ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಕ್ಕೂ ನಮ್ಮ ಲೆಕ್ಕಾಚಾರಕ್ಕೂ ಹೊಂದಿಕೆ ಆಗುತ್ತಿಲ್ಲ. ನಾವು ಕಳೆದ ಬಾರಿ 11 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಜೆಡಿಎಸ್ 2 ಗೆದ್ದಿತ್ತು. ಈ ಸಲ ಅದಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ನಾವು ಈಗ ಹೇಳಿರೋದಕ್ಕಿಂತಲೂ ಡಬಲ್ ಸ್ಥಾನಗಳನ್ನು ಗೆಲ್ಲುತ್ತೇವೆ. ಬಿಜೆಪಿ ಆಡಳಿತದಲ್ಲಿ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ. ತಮ್ಮ ಮಾತುಗಳನ್ನೇ ಅವರು ಉಳಿಸಿಕೊಳ್ಳಲಿಲ್ಲ. ಎಕ್ಸಿಟ್ ಪೋಲ್ ಗಳೇ ನಿಜವಾಗಿಬಿಟ್ಟರೆ 23ರ ತನಕ ಯಾಕೆ ಕಾಯಬೇಕು? ಎಂದು ಪ್ರಶ್ನಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…