Featured

ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಗೆಲುವು : ಈ ಸಮೀಕ್ಷೆಗಳು ನಿಜವಾಗಲ್ಲ ; ರಾಜ್ಯದಲ್ಲೂ, ದೇಶದಲ್ಲೂ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ: ದಿನೇಶ್ ಗುಂಡುರಾವ್ -Vishwanews24

ಬೆಂಗಳೂರು: ಮೋದಿಯವರು ಅಭಿವೃದ್ಧಿಪರ ಆಡಳಿತ ಕೊಡಲಿಲ್ಲ. ಮೋದಿಯವರು ಪ್ರಚಾರದಲ್ಲೇ ಆಡಳಿತ ಮಾಡಿದ್ದಾರೆ. ಸಾಕಷ್ಟು ಸಮಸ್ಯೆಗಳಿದ್ದರೂ ಅವರಿಗೆ ಇಷ್ಟೊಂದು ಅಂಕಿ ಸಂಖ್ಯೆ ತೋರಿಸುತ್ತಿರೋದು ಆಶ್ಚರ್ಯವಾಗುತ್ತಿದೆ. ಎಷ್ಟೋ ಎಕ್ಸಿಟ್ ಪೋಲ್‍ಗಳು ನಿಜವಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಈ ಸಮೀಕ್ಷೆಗಳು ತೋರಿಸಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ನಾವು ಪಡೆಯುತ್ತೇವೆ. ಎರಡೂ ಪಕ್ಷಗಳು ಇನ್ನೂ ಚೆನ್ನಾಗಿ ಕೆಲಸ ಮಾಡಿದರೆ ಇನ್ನೂ ಹೆಚ್ಚಾಗಿ ಸೀಟುಗಳನ್ನು ಗೆಲ್ಲಬಹುದಿತ್ತು. ಈ ಸಮೀಕ್ಷೆಗಳನ್ನು ನಾನು ಒಪ್ಪಲ್ಲ. 23 ರ ತನಕ ಕಾಯೋಣ. ಆವತ್ತು ನಿಜವಾದ ಸಮೀಕ್ಷೆ ಬರುತ್ತೆ. ನಾವು ರಾಜ್ಯದಲ್ಲೂ, ದೇಶದಲ್ಲೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಕ್ಕೂ ನಮ್ಮ ಲೆಕ್ಕಾಚಾರಕ್ಕೂ ಹೊಂದಿಕೆ ಆಗುತ್ತಿಲ್ಲ. ನಾವು ಕಳೆದ ಬಾರಿ 11 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಜೆಡಿಎಸ್ 2 ಗೆದ್ದಿತ್ತು. ಈ ಸಲ ಅದಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ನಾವು ಈಗ ಹೇಳಿರೋದಕ್ಕಿಂತಲೂ ಡಬಲ್ ಸ್ಥಾನಗಳನ್ನು ಗೆಲ್ಲುತ್ತೇವೆ. ಬಿಜೆಪಿ ಆಡಳಿತದಲ್ಲಿ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ. ತಮ್ಮ ಮಾತುಗಳನ್ನೇ ಅವರು ಉಳಿಸಿಕೊಳ್ಳಲಿಲ್ಲ. ಎಕ್ಸಿಟ್ ಪೋಲ್ ಗಳೇ ನಿಜವಾಗಿಬಿಟ್ಟರೆ 23ರ ತನಕ ಯಾಕೆ ಕಾಯಬೇಕು? ಎಂದು ಪ್ರಶ್ನಿಸಿದರು.

 

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

13 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

13 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

13 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

14 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

17 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

17 hours ago