Featured

ಚೆಕ್ ಬೌನ್ಸ್ ಪ್ರಕರಣ: ಕಿರುತೆರೆ ನಟಿ ಪದ್ಮಜಾ ರಾವ್ ಗೆ 3 ತಿಂಗಳು ಜೈಲು ಶಿಕ್ಷೆ ; 40.20 ಲಕ್ಷ ರೂ. ದಂಡ – vishwanews24

ಚೆಕ್ ಬೌನ್ಸ್ ಪ್ರಕರಣ: ಕಿರುತೆರೆ ನಟಿ ಪದ್ಮಜಾ ರಾವ್ ಗೆ 3 ತಿಂಗಳು ಜೈಲು ಶಿಕ್ಷೆ ; 40.20 ಲಕ್ಷ ರೂ. ದಂಡ

ಮಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ.

ನಟಿ ಪದ್ಮಜಾ ರಾವ್ ಅವರು ಜೂನ್ 17, 2020 ರಂದು 40 ಲಕ್ಷ ಕೈ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ ಖಾತೆಗೆ ಸಂಬಂಧಿಸಿದ ಚೆಕ್ ನೀಡಿದ್ದರು. ಈ ಚೆಕ್ ಅನ್ನು ನಗದೀಕರಿಸಲು ಹಾಕಿದಾಗ, ಪದ್ಮಜಾ ರಾವ್ ಅವರ ಖಾತೆಯಲ್ಲಿ ಅಷ್ಟೊಂದು ಮೊತ್ತ ಇರಲಿಲ್ಲ. 15 ದಿನಗಳ ಒಳಗೆ ಸಾಲದ ಹಣ ಪಾವತಿಸುವಂತೆ 2020ರ ಜೂನ್ 30ರಂದು ಪದ್ಮಜಾ ರಾವ್ ಅವರಿಗೆ ನೋಟಿಸ್ ನೀಡಿದರೂ ಅವರು ಹಣ ಪಾವತಿಸಿರಲಿಲ್ಲ ಎಂದು ವೀರೂ ಟಾಕೀಸ್ ಸಂಸ್ಥೆಯ ಮಾಲೀಕ, ಮಂಗಳೂರು ಮೇರಿಹಿಲ್ ನಿವಾಸಿ ವೀರೇಂದ್ರ ಶೆಟ್ಟಿ ನ್ಯಾಯಾಲಯದ ಮೊರೆ ಹೋಗಿದ್ದರು.

ಸಮನ್ಸ್ ಜಾರಿಯಾದ ಬಳಿಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ಪದ್ಮಜಾ ರಾವ್ ಅವರು ನಾನು ದೂರುದಾರರಿಂದ ಯಾವುದೇ ಸಾಲ ಪಡೆದಿಲ್ಲ. ಅವರಿಗೆ ಯಾವುದೇ ಚೆಕ್ ನೀಡಿಲ್ಲ ಎಂದು ಹೇಳಿಕೆ ನೀಡಿದ್ದರು.

52.70 ಲಕ್ಷ ವಂಚನೆ ಮಾಡಿದ ಬಗ್ಗೆ ವೀರೇಂದ್ರ ಶೆಟ್ಟಿ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀ ಸ್ ಠಾಣೆಯಲ್ಲಿ 2020ಮಾರ್ಚ್‌ 23ರಂದು ದೂರು ದಾಖಲಿಸಿದ್ದಕ್ಕೆ ಪ್ರತಿಯಾಗಿ ತಮ್ಮ ಕಕ್ಷಿದಾರರ ವಿರುದ್ಧ ಈ ಆರೋಪ ಮಾಡಿದ್ದಾರೆ. ಅವರ ಮನೆಯಿಂದ ಚೆಕ್ ಕಳವು ಮಾಡಿ ಸಹಿಯನ್ನು ಪೋರ್ಜರಿ ಮಾಡಲಾಗಿದೆ ಎಂದು ಪದ್ಮಜಾರಾವ್ ಪರ ವಕೀಲರು ವಾದಿಸಿದ್ದರು. ಆದರೆ, ಇದಕ್ಕೆ ಪೂರಕ ಪುರಾವೆಗಳನ್ನು ಒದಗಿಸುವಲ್ಲಿ ಅವರು ವಿಫಲರಾಗಿದ್ದರು.

8ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಫವಾಜ್ ಪಿ.ಎ ಪದ್ಮಜಾ ರಾವ್ ಅವರು 40.20 ಲಕ್ಷ ರೂ. ದಂಡ ಪಾವತಿಸಬೇಕು. ಅದರಲ್ಲಿ 40.17 ಲಕ್ಷವನ್ನು ದೂರುದಾರರಿಗೆ ನೀಡಬೇಕು ಹಾಗೂ 3 ಸಾವಿರವನ್ನು ನ್ಯಾಯಾಲಯಕ್ಕೆ ಪಾವತಿಸಬೇಕು ಎಂದು ತೀರ್ಪು ನೀಡಿದ್ದಾರೆ.

Vishwa News 24

Recent Posts

ರೈಲ್ವೆ ಪ್ರಯಾಣಿಕರ ಗಮನಕ್ಕೆ : ಮಂಗಳೂರು-ಬೆಂಗಳೂರು ಹಲವು ರೈಲುಗಳ ಸಂಚಾರ ಬಂದ್ -vishwanews24

ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…

29 minutes ago

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago