ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದ್ದು , ನಂತರ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಎನ್ನುವವರಿಂದ ಗುರು ಪ್ರಸಾದ್ 30 ಲಕ್ಷ ರೂಪಾಯಿಯನ್ನು ಸಾಲವಾಗಿ ಪಡೆದುಕೊಂಡಿದ್ದರು. ಸಿನಿಮಾ ಮಾಡುವುದಾಗಿ ಸಾಲ ಪಡೆದಿದ್ದ ಗುರುಪ್ರಸಾದ್, ನಂತರ ಹಣ ಕೊಡದೇ ವಂಚಿಸಿದ್ದರು. ಹಣ ಕೇಳುವುದಕ್ಕೆ ಹೋದವರ ಮೇಲೆಯೇ ಸುಳ್ಳು ಕೇಸ್ ಅನ್ನು ಕೂಡ ದಾಖಲಿಸಿದ್ದರು. ಹಾಗಾಗಿ ಶ್ರೀನಿವಾಸ್ ಅವರು ಗುರುಪ್ರಸಾದ್ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.
ಶ್ರೀನಿವಾಸ್ ದೂರು ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ ನಿಂದ ಎನ್.ಬಿ ಡಬ್ಲ್ಯು ಜಾರಿ ಆಗಿತ್ತು. ಎನ್.ಐ ಆಕ್ಟ್ ಅಡಿ ಗುರುಪ್ರಸಾದ್ ವಿರುದ್ದ ಚೆಕ್ ಬೌನ್ಸ್ ಕೇಸ್ ನಲ್ಲಿ ವಾರೆಂಟ್ ಜಾರಿ ಆಗಿತ್ತು. ಹಾಗಾಗಿ ಗಿರಿನಗರ ಪೊಲೀಸರು ಗುರುಪ್ರಸಾದ್ ಅವರನ್ನು ಬಂಧಿಸಿ, ಮೆಡಿಕಲ್ ಟೆಸ್ಟ್ ನಂತರ ಕೋರ್ಟ್ ಮುಂದೆ ಹಾಜರು ಪಡಿಸಲು ಕರೆದುಕೊಂಡು ಹೋಗಿದ್ದಾರೆ.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…