ನವದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಾಜ್ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ (ಜು.10) ಮೂರು ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದೆ.
ನಟ ರಾಜ್ಪಾಲ್ ಯಾದವ್ ವಿರುದ್ಧ ದಾಖಲಾಗಿದ್ದ ಒಟ್ಟು ಏಳು ಪ್ರಕರಣಗಳಲ್ಲಿ ತಲಾ ಮೂರು ತಿಂಗಳ ಕಾರಾಗೃಹ ವಾಸದ ಶಿಕ್ಷೆ ಪ್ರಕಟಿಸಲಾಗಿದ್ದು, ಇವೆಲ್ಲವೂ ಏಕಕಾಲದಲ್ಲಿ ಚಾಲ್ತಿಯಲ್ಲಿರಲಿವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದರೆ, ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಹೈಕೋರ್ಟ್
ನಟನಿಗೆ ಎರಡು ತಿಂಗಳ ಕಾಲಾವಕಾಶ ನೀಡಿದೆ.
ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ಹೊರಡಿಸಿದ್ದು, ದೂರುದಾರ ಸಂಸ್ಥೆಯಾದ ‘ಮುರಳಿ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್’ಗೆ ಪ್ರತಿ ಪ್ರಕರಣದಲ್ಲಿ ತಲಾ 1.05 ಕೋಟಿ ರೂಪಾಯಿ ಪಾವತಿಸುವಂತೆ ರಾಜ್ಪಾಲ್ ಯಾದವ್ಗೆ ನಿರ್ದೇಶಿಸಿದೆ. ಇದರೊಂದಿಗೆ ಹೆಚ್ಚುವರಿಯಾಗಿ 1.04 ಕೋಟಿ ರೂ.ಗಳನ್ನು ದೂರುದಾರರಿಗೆ ಹಾಗೂ 25,000 ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಪಾವತಿಸಬೇಕಿದೆ. ಅಲ್ಲದೆ, ನಟನ ಪತ್ನಿ ರಾಧಾ ಯಾದವ್ ಅವರು ಪ್ರತಿ ಪ್ರಕರಣದಲ್ಲೂ ತಲಾ 5.51 ಕೋಟಿ ರೂ.ಗಳನ್ನು ದೂರುದಾರರಿಗೆ ನೀಡುವಂತೆ ಕೋರ್ಟ್ ಸೂಚಿಸಿದೆ. ನಟ ಈಗಾಗಲೇ ಪಾವತಿಸಿರುವ 2.25 ಕೋಟಿ ರೂಪಾಯಿಗಳನ್ನು ಈ ಒಟ್ಟು ಮೊತ್ತದಲ್ಲಿ ಕಡಿತಗೊಳಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.
ಈ ವಿವಾದ 2010ರಲ್ಲಿ ಆರಂಭವಾಗಿತ್ತು. ರಾಜ್ಪಾಲ್ ಯಾದವ್ ಅವರು ತಮ್ಮ ‘ಅತಾ ಪತಾ ಲಾಪತಾ’ ಚಿತ್ರದ ನಿರ್ಮಾಣಕ್ಕಾಗಿ ಮುರಳಿ ಪ್ರಾಜೆಕ್ಟ್ ಸಂಸ್ಥೆಯಿಂದ 5 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಆದರೆ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸೋತಿದ್ದರಿಂದ ನಟ ತೀವ್ರ ಆರ್ಥಿಕ ನಷ್ಟ ಅನುಭವಿಸಿದರು. ಸಾಲ ಮರುಪಾವತಿಗೆ ನೀಡಿದ್ದ ಚೆಕ್ಗಳು ಬೌನ್ಸ್ ಆದ ಹಿನ್ನೆಲೆಯಲ್ಲಿ 2018ರಲ್ಲಿ ವಿಚಾರಣಾ ನ್ಯಾಯಾಲಯ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಅಂದಿನಿಂದ ಇಂದಿನವರೆಗೆ ಬಡ್ಡಿ ಸೇರಿ ಈ ಬಾಕಿ ಮೊತ್ತ ಸುಮಾರು 9 ಕೋಟಿ ರೂಪಾಯಿಗೆ ಏರಿಕೆಯಾಗಿದೆ.
ಈ ಹಿಂದೆ ಹಣ ಪಾವತಿಸುವ ಭರವಸೆಯ ಮೇರೆಗೆ ಹೈಕೋರ್ಟ್ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟಿತ್ತು. ಆದರೆ ನಟ ನೀಡಿದ ಭರವಸೆಯನ್ನು ಈಡೇರಿಸದ ಕಾರಣ, ಕೋರ್ಟ್ ಶರಣಾಗುವಂತೆ ಆದೇಶಿಸಿತ್ತು. ಅದರಂತೆ ಫೆಬ್ರವರಿ 5 ರಂದು ಶರಣಾಗಿದ್ದ ನಟ, ಬಳಿಕ 1.5 ಕೋಟಿ ರೂ. ಠೇವಣಿ ಇಟ್ಟು ಮಧ್ಯಂತರ ಪರಿಹಾರ ಪಡೆದುಕೊಂಡಿದ್ದರು. ಇದೀಗ ಹೈಕೋರ್ಟ್ ಅವರ ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿ ಶಿಕ್ಷೆಯನ್ನು ಖರಾರು ಮಾಡಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]