ಚೆನ್ನೈ: ಭಾರಿ ಮಳೆ ಮತ್ತು ತೀವ್ರ ಗಾಳಿಯೊಂದಿಗೆ ಭೀಕರ ‘ನಿವಾರ’ ಚಂಡಮಾರುತ ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದಾಗಿ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5 ಮಂದಿ ಸಾವನ್ನಪ್ಪಿ, 80ಕ್ಕೂ ಹೆಚ್ಚು ಮರಗಳು ಧರುಗುರುಳಿರುವುದಾಗಿ ವರದಿಗಳಿಂದ ತಿಳಿದುಬಂದಿದೆ.
ಚಂಡಮಾರುತದಿಂದ ಭಾರೀ ಮಳೆ ಶುರುವಾಗಿದೆ ಎಂದು ಚೆನ್ನೈನ ಹವಾಮಾನ ಇಲಾಖೆ ಅಧಿಕಾರಿ ಎಸ್ ಬಾಲಚಂದ್ರನ್ ಹೇಳಿದ್ದಾರೆ.
ಚಂಡಮಾರುತ ಸದ್ಯ, ಕಡಲೂರಿನ ಪೂರ್ವ-ಆಗ್ನೇಯಕ್ಕೆ 50 ಕಿ.ಮೀ ಮತ್ತು ಪುದುಚೇರಿಯ ಪೂರ್ವ ಆಗ್ನೇಯಕ್ಕೆ ಸುಮಾರು 40 ಕಿ.ಮೀ.ದೂರದಲ್ಲಿದೆ.ಬುಧವಾರ ರಾತ್ರಿಯೇ ನಿವಾಸ್ ತೀವ್ರ ಸ್ವರೂಪ ಪಡೆದುಕೊಂಡಿದ್ದು. ತಮುಳುನಾಡು ಮತ್ತು ಪುದುಚೇರಿಯನ್ನು ಕಾರೈಕಲ್ ಮತ್ತು ಮಾಮಲ್ಲಪುರಂ ನಡುವೆ ಹಾದುಹೋಗಲಿದೆ. ಈ ವೇಳೆಗೆ ಗಂಟೆಗೆ 120-130 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆಗಳಿವೆ.
ಹೀಗಾಗಿ ಯಾರೂ ಕೂಡ ಮೀನುಗಾರಿಕೆ, ಮೋಟರ್ ಬೋಟ್ಸ್ ಸೇರಿ ಇನ್ನಿತರ ಚಟುವಟಿಕೆಗಳಿಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡಿನಲ್ಲಿ ಮಂಗಳವಾರದಿಂದಲೇ ಮಳೆಯಾಗುತ್ತಿದ್ದು, ಚಂಡಮಾರುತದ ಹಿನ್ನೆಲೆಯಲ್ಲಿ ಗುರುವಾರ ರಜೆ ಘೋಷಿಸಲಾಗಿದೆ.
ಈ ನಡುವೆ ಚಂಡಮಾರುತದ ಸವಾಲುಗಳನ್ನು ಎದುರಿಸಲು ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ 1200 ಸಿಬ್ಬಂದಿ ಸಜ್ಜಾಗಿದ್ದಾರೆ. ಇತರೆ 800 ಹೆಚ್ಚುವರಿ ಮಂದಿ ಸನ್ನದ್ಧ ಸ್ಥಿತಿಯಲ್ಲಿದ್ದಾರೆ. ಮತ್ತೊಂದೆಡೆ ಆಂಧ್ರಪ್ರದೇಶದ ಮೇಲೆ ಗತಿ ಚಂಡಮಾರುತ ಕೂಡ ದಾಳಿ ನಡೆಸುತ್ತಿದೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…