ಚೆನ್ನೈ: ಭಾರಿ ಮಳೆ ಮತ್ತು ತೀವ್ರ ಗಾಳಿಯೊಂದಿಗೆ ಭೀಕರ ‘ನಿವಾರ’ ಚಂಡಮಾರುತ ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದಾಗಿ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5 ಮಂದಿ ಸಾವನ್ನಪ್ಪಿ, 80ಕ್ಕೂ ಹೆಚ್ಚು ಮರಗಳು ಧರುಗುರುಳಿರುವುದಾಗಿ ವರದಿಗಳಿಂದ ತಿಳಿದುಬಂದಿದೆ.
ಚಂಡಮಾರುತದಿಂದ ಭಾರೀ ಮಳೆ ಶುರುವಾಗಿದೆ ಎಂದು ಚೆನ್ನೈನ ಹವಾಮಾನ ಇಲಾಖೆ ಅಧಿಕಾರಿ ಎಸ್ ಬಾಲಚಂದ್ರನ್ ಹೇಳಿದ್ದಾರೆ.
ಚಂಡಮಾರುತ ಸದ್ಯ, ಕಡಲೂರಿನ ಪೂರ್ವ-ಆಗ್ನೇಯಕ್ಕೆ 50 ಕಿ.ಮೀ ಮತ್ತು ಪುದುಚೇರಿಯ ಪೂರ್ವ ಆಗ್ನೇಯಕ್ಕೆ ಸುಮಾರು 40 ಕಿ.ಮೀ.ದೂರದಲ್ಲಿದೆ.ಬುಧವಾರ ರಾತ್ರಿಯೇ ನಿವಾಸ್ ತೀವ್ರ ಸ್ವರೂಪ ಪಡೆದುಕೊಂಡಿದ್ದು. ತಮುಳುನಾಡು ಮತ್ತು ಪುದುಚೇರಿಯನ್ನು ಕಾರೈಕಲ್ ಮತ್ತು ಮಾಮಲ್ಲಪುರಂ ನಡುವೆ ಹಾದುಹೋಗಲಿದೆ. ಈ ವೇಳೆಗೆ ಗಂಟೆಗೆ 120-130 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆಗಳಿವೆ.
ಹೀಗಾಗಿ ಯಾರೂ ಕೂಡ ಮೀನುಗಾರಿಕೆ, ಮೋಟರ್ ಬೋಟ್ಸ್ ಸೇರಿ ಇನ್ನಿತರ ಚಟುವಟಿಕೆಗಳಿಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡಿನಲ್ಲಿ ಮಂಗಳವಾರದಿಂದಲೇ ಮಳೆಯಾಗುತ್ತಿದ್ದು, ಚಂಡಮಾರುತದ ಹಿನ್ನೆಲೆಯಲ್ಲಿ ಗುರುವಾರ ರಜೆ ಘೋಷಿಸಲಾಗಿದೆ.
ಈ ನಡುವೆ ಚಂಡಮಾರುತದ ಸವಾಲುಗಳನ್ನು ಎದುರಿಸಲು ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ 1200 ಸಿಬ್ಬಂದಿ ಸಜ್ಜಾಗಿದ್ದಾರೆ. ಇತರೆ 800 ಹೆಚ್ಚುವರಿ ಮಂದಿ ಸನ್ನದ್ಧ ಸ್ಥಿತಿಯಲ್ಲಿದ್ದಾರೆ. ಮತ್ತೊಂದೆಡೆ ಆಂಧ್ರಪ್ರದೇಶದ ಮೇಲೆ ಗತಿ ಚಂಡಮಾರುತ ಕೂಡ ದಾಳಿ ನಡೆಸುತ್ತಿದೆ
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…