Featured

ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವು ;  60 ಜನರು ಅಸ್ವಸ್ಥ – vishwanews24

ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವು ;  60 ಜನರು ಅಸ್ವಸ್ಥ

ಕಲ್ಲಾಕುರಿಚಿ ಜಿಲ್ಲಾಧಿಕಾರಿ ಶ್ರವಣ್ ಕುಮಾರ್ ವರ್ಗಾವಣೆ.. 10 ಸಿಬ್ಬಂದಿ ಅಮಾನತು

ಚೆನ್ನೈ: ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವನ್ನಪ್ಪಿದ ದುರ್ಘಟನೆ ತಮಿಳುನಾಡಿನ ಉತ್ತರ ಭಾಗದ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 60 ಜನರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾದ ಜನರನ್ನು ಜಿಲ್ಲಾ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಜಿಲ್ಲಾಧಿಕಾರಿ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಪ್ರಕರಣ ಸಂಬಂಧ ಕೆ.ಕನ್ನುಕುಟ್ಟಿ (49) ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಲ್ಲದೇ ಬಂಧಿತನಿಂದ ಸುಮಾರು 200 ಲೀಟರ್ ಅಕ್ರಮ ಅರಕ್‌ ಅನ್ನು ವಶಕ್ಕೆ ಪಡೆದು ತಪಾಸಣೆ ಮಾಡಲಾಗಿದೆ. ಈ ವೇಳೆ ಇದರಲ್ಲಿ ಮಾರಣಾಂತಿಕ ಮೆಥನಾಲ್ ಅನ್ನು ಹೆಚ್ಚಾಗಿ ಬಳಕೆ ಮಾಡಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ.

ಕಳ್ಳಭಟ್ಟಿ ಸೇವಿಸಿ ಸಾವನ್ನಪ್ಪಿದವರು ಸುದ್ದಿ ತಿಳಿದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ದುಃಖ ವ್ಯಕ್ತಪಡಿಸಿದ್ದಾರೆ. ಇಂತಹ ಅಪರಾಧಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಸಮಾಜವನ್ನು ಹಾಳು ಮಾಡುವ ಇಂತಹ ಅಪರಾಧಗಳನ್ನು ತಡೆದು ಶಿಕ್ಷೆ ನೀಡಲಾಗುವುದು ಎಂಂದು ಹೇಳಿದ್ದಾರೆ.

ಇನ್ನು ಘಟನೆಗೆ ಕಾರಣರಾದ ಆರೋಪಿಗಳ ಬಂಧಿಸಲಾಗಿದೆ ಎಂದ ತಮಿಳುನಾಡು ಸರ್ಕಾರ ಹೇಳಿದೆ. ಮೃತರ ಕುಟುಂಬಗಳಿಗೆ ರಾಜ್ಯಪಾಲ ಆರ್.ಎನ್.ರವಿ ಸಾಂತ್ವನ ಹೇಳಿದ್ದಾರೆ.

ಘಟನೆ ಸಂಬಂಧ ಕಲ್ಲಾಕುರಿಚಿ ಜಿಲ್ಲಾಧಿಕಾರಿ ಶ್ರವಣ್ ಕುಮಾರನ್ನ ವರ್ಗಾವಣೆ ಮಾಡಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಸಮಯ್ ಸಿಂಗ್ ಮೀನಾ ಮತ್ತು 9 ಸಿಬ್ಬಂದಿಯನ್ನ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Vishwa News 24

Recent Posts

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

4 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

9 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

14 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

26 minutes ago

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು  ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…

39 minutes ago

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

19 hours ago