ಚೆನ್ನೈ: ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವನ್ನಪ್ಪಿದ ದುರ್ಘಟನೆ ತಮಿಳುನಾಡಿನ ಉತ್ತರ ಭಾಗದ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 60 ಜನರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾದ ಜನರನ್ನು ಜಿಲ್ಲಾ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಜಿಲ್ಲಾಧಿಕಾರಿ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಪ್ರಕರಣ ಸಂಬಂಧ ಕೆ.ಕನ್ನುಕುಟ್ಟಿ (49) ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಲ್ಲದೇ ಬಂಧಿತನಿಂದ ಸುಮಾರು 200 ಲೀಟರ್ ಅಕ್ರಮ ಅರಕ್ ಅನ್ನು ವಶಕ್ಕೆ ಪಡೆದು ತಪಾಸಣೆ ಮಾಡಲಾಗಿದೆ. ಈ ವೇಳೆ ಇದರಲ್ಲಿ ಮಾರಣಾಂತಿಕ ಮೆಥನಾಲ್ ಅನ್ನು ಹೆಚ್ಚಾಗಿ ಬಳಕೆ ಮಾಡಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಕಳ್ಳಭಟ್ಟಿ ಸೇವಿಸಿ ಸಾವನ್ನಪ್ಪಿದವರು ಸುದ್ದಿ ತಿಳಿದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ದುಃಖ ವ್ಯಕ್ತಪಡಿಸಿದ್ದಾರೆ. ಇಂತಹ ಅಪರಾಧಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಸಮಾಜವನ್ನು ಹಾಳು ಮಾಡುವ ಇಂತಹ ಅಪರಾಧಗಳನ್ನು ತಡೆದು ಶಿಕ್ಷೆ ನೀಡಲಾಗುವುದು ಎಂಂದು ಹೇಳಿದ್ದಾರೆ.
ಇನ್ನು ಘಟನೆಗೆ ಕಾರಣರಾದ ಆರೋಪಿಗಳ ಬಂಧಿಸಲಾಗಿದೆ ಎಂದ ತಮಿಳುನಾಡು ಸರ್ಕಾರ ಹೇಳಿದೆ. ಮೃತರ ಕುಟುಂಬಗಳಿಗೆ ರಾಜ್ಯಪಾಲ ಆರ್.ಎನ್.ರವಿ ಸಾಂತ್ವನ ಹೇಳಿದ್ದಾರೆ.
ಘಟನೆ ಸಂಬಂಧ ಕಲ್ಲಾಕುರಿಚಿ ಜಿಲ್ಲಾಧಿಕಾರಿ ಶ್ರವಣ್ ಕುಮಾರನ್ನ ವರ್ಗಾವಣೆ ಮಾಡಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಸಮಯ್ ಸಿಂಗ್ ಮೀನಾ ಮತ್ತು 9 ಸಿಬ್ಬಂದಿಯನ್ನ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…