Featured

ಚೆನ್ನೈ:  ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತ – ಆಟಗಾರನ ದುರಂತ ಅಂತ್ಯ ; ಗೆದ್ದ ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ – Vishwanews24

ಚೆನ್ನೈ:  ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತ – ಆಟಗಾರನ ದುರಂತ ಅಂತ್ಯ ; ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ

ಚೆನ್ನೈ:  ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಆಟಗಾರ ಸಾವು: ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ

ಚೆನ್ನೈ: ಕಬಡ್ಡಿ ಆಡುತ್ತಿರುವ ವೇಳೆ ವಿದ್ಯಾರ್ಥಿಯೊಬ್ಬ ಆಟದ ಮೈದಾನದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಪನ್ರುತಿ ಬಳಿಯ ಮನ್ನಾಡಿಕುಪ್ಪಂ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾರ್ಥಿ ವಿಮಲ್‌ರಾಜ್ (22) ಮೃತ ದುರ್ದೈವಿ.

ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ಪ್ರಾಣಿಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ವಿಮಲರಾಜ್ ವಾರಾಂತ್ಯಕ್ಕೆ ಮನೆಗೆ ಬಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಿನ್ನೆ ಸಂಜೆ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮುರಟ್ಟು ಕಾಳಾಯಿ ತಂಡವನ್ನು ಪ್ರತಿನಿಧಿಸುತ್ತಿದ್ದರು.

ಇದನ್ನೂ ಓದಿ : ಉಡುಪಿ : ಪಿಎಸ್​ಐ ಹಗರಣ – ನನಗೆ ಮೊದಲೇ ಗೊತ್ತಿತ್ತು: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ – Vishwanews24 

ವಿಮಲ್‌ ರೈಡ್‌ ಮಾಡುತ್ತಿದ್ದ ವೇಳೆ, ಎದುರಾಳಿ ತಂಡದ ಸದಸ್ಯರು ಅವರನ್ನು ಎಳೆದು ಕೆಳಗೆ ಬೀಳಿಸಿದ್ದಾರೆ. ಬಳಿಕ ಮೇಲಕ್ಕೇಳಲು ಪ್ರಯತ್ನಿಸುತ್ತಿರುವ ವೇಳೆ ಮತ್ತೆ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆ ವಿಮಲ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವಿಲ್ಲುಪುರಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಗೆಳೆಯನ ಅಗಲಿಕೆಯ ನೋವಿನ ನಡುವೆ ಮೈದಾನಕ್ಕಿಳಿದ ಮುರುಟ್ಟು ಕಾಳೈ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದ್ದು ವಿಶೇಷ. ಅಷ್ಟೇ ಅಲ್ಲದೆ ಗೆದ್ದ ಟ್ರೋಫಿಯೊಂದಿಗೆ ವಿಮಲ್ ರಾಜ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದಾರೆ ಎಂದು ತಿಳಿದುಬಂದಿದೆ.

ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ , ಆದಿಚುಂಚನಗಿರಿ ಸ್ವಾಮಿಗಳು : ಜಮೀರ್‌ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

29 minutes ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 hours ago