Featured

ಚೆನ್ನೈ:  ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತ – ಆಟಗಾರನ ದುರಂತ ಅಂತ್ಯ ; ಗೆದ್ದ ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ – Vishwanews24

ಚೆನ್ನೈ:  ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತ – ಆಟಗಾರನ ದುರಂತ ಅಂತ್ಯ ; ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ

ಚೆನ್ನೈ:  ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಆಟಗಾರ ಸಾವು: ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ

ಚೆನ್ನೈ: ಕಬಡ್ಡಿ ಆಡುತ್ತಿರುವ ವೇಳೆ ವಿದ್ಯಾರ್ಥಿಯೊಬ್ಬ ಆಟದ ಮೈದಾನದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಪನ್ರುತಿ ಬಳಿಯ ಮನ್ನಾಡಿಕುಪ್ಪಂ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾರ್ಥಿ ವಿಮಲ್‌ರಾಜ್ (22) ಮೃತ ದುರ್ದೈವಿ.

ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ಪ್ರಾಣಿಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ವಿಮಲರಾಜ್ ವಾರಾಂತ್ಯಕ್ಕೆ ಮನೆಗೆ ಬಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಿನ್ನೆ ಸಂಜೆ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮುರಟ್ಟು ಕಾಳಾಯಿ ತಂಡವನ್ನು ಪ್ರತಿನಿಧಿಸುತ್ತಿದ್ದರು.

ಇದನ್ನೂ ಓದಿ : ಉಡುಪಿ : ಪಿಎಸ್​ಐ ಹಗರಣ – ನನಗೆ ಮೊದಲೇ ಗೊತ್ತಿತ್ತು: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ – Vishwanews24 

ವಿಮಲ್‌ ರೈಡ್‌ ಮಾಡುತ್ತಿದ್ದ ವೇಳೆ, ಎದುರಾಳಿ ತಂಡದ ಸದಸ್ಯರು ಅವರನ್ನು ಎಳೆದು ಕೆಳಗೆ ಬೀಳಿಸಿದ್ದಾರೆ. ಬಳಿಕ ಮೇಲಕ್ಕೇಳಲು ಪ್ರಯತ್ನಿಸುತ್ತಿರುವ ವೇಳೆ ಮತ್ತೆ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆ ವಿಮಲ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವಿಲ್ಲುಪುರಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಗೆಳೆಯನ ಅಗಲಿಕೆಯ ನೋವಿನ ನಡುವೆ ಮೈದಾನಕ್ಕಿಳಿದ ಮುರುಟ್ಟು ಕಾಳೈ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದ್ದು ವಿಶೇಷ. ಅಷ್ಟೇ ಅಲ್ಲದೆ ಗೆದ್ದ ಟ್ರೋಫಿಯೊಂದಿಗೆ ವಿಮಲ್ ರಾಜ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದಾರೆ ಎಂದು ತಿಳಿದುಬಂದಿದೆ.

ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ , ಆದಿಚುಂಚನಗಿರಿ ಸ್ವಾಮಿಗಳು : ಜಮೀರ್‌ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

7 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago