ಚೆನ್ನೈ: ಚಂಡಮಾರುತದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ಥಗೊಂಡಿದೆ, ಚೆನ್ನೈನಲ್ಲಿ ಸುರಿದ ಭಾರಿ ಮಳೆಗೆ ಕೇವಲ ಜನಸಾಮಾನ್ಯರು ಮಾತ್ರವಲ್ಲದೆ ಫಿಲ್ಮ್ ಇಂಡಸ್ಟ್ರಿಯ ಕೆಲವು ಸ್ಟಾರ್ ನಟರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಭಾರಿಯ ಪ್ರವಾಹದಲ್ಲಿ ಸಂಕಷ್ಟಕ್ಕೆ ಸಿಲುಕಿದವರಲ್ಲಿ ತಮಿಳು ನಟ ವಿಷ್ಣು ವಿಶಾಲ್, ಹಾಗೂ ಬಾಲಿವುಡ್ ಸ್ಟಾರ್ ಅಮೀರ್ ಖಾನ್ ಕೂಡ ಸೇರಿದ್ದಾರೆ.
ಸೌತ್ ಸ್ಟಾರ್ ವಿಷ್ಣು ವಿಶಾಲ್ ಮನೆಗೆ ಪ್ರವಾಹದ ನೀರು ನುಗ್ಗಿದ್ದು ಇದರ ಚಿತ್ರಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅಲ್ಲಿನ ಸುತ್ತಮುತ್ತಲ ಪ್ರದೇಶಗಳು ನೀರಿನಿಂದ ಮುಳುಗಡೆಯಾಗಿದ್ದು ಅಲ್ಲಿನ ಜನರು ಕೂಡ ಸಂಕಷ್ಟಕ್ಕೆ ಒಳಗಾಗಿದ್ದಾರೆ ಬದಲಾಗಿ, ಇಲ್ಲಿ ವಿದ್ಯುತ್ ಸಂಪರ್ಕ ಕೂಡಾ ಕಡಿತಗೊಂಡಿದ್ದು ಜನರ ಸಹಾಯಕ್ಕೆ ಫೋನ್ ಕರೆ ಕೂಡ ಮಾಡುವಂತಿಲ್ಲ ಎಂದು ಬರೆದುಕೊಂಡಿದ್ದಾರೆ.
ವಿಷ್ಣು ವಿಶಾಲ್ ಅವರ ಟ್ವೀಟ್ ಗಮನಿಸಿದ ಅವರ ಅಭಿಮಾನಿಗಳು ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದಾರೆ ಕೂಡಲೇ ರಕ್ಷಣಾ ತಂಡ ವಿಷ್ಣು ವಿಶಾಲ್ ಅವರು ಇರುವ ಪ್ರದೇಶಕ್ಕೆ ತೆರಳಿ ವಿಷ್ಣು ವಿಶಾಲ್ ಕುಟುಂಬ ಹಾಗು ಅಲ್ಲಿನ ಇತರ ಜನರನ್ನು ರಕ್ಷಣೆ ಮಾಡಿದ್ದಾರೆ.
ಈ ವೇಳೆ ಚೆನ್ನೈ ನಲ್ಲಿ ನೆಲೆಸಿರುವ ಬಾಲಿವುಡ್ ನಟ ಅಮೀರ್ ಖಾನ್ ಕೂಡ ಪ್ರವಾಹದಲ್ಲಿ ಸಿಲುಕಿದ್ದು ಅವರ ತಾಯಿಯ ಚಿಕಿತ್ಸೆಗಾಗಿ ಕಳೆದ ಕೆಲವು ಸಮಯಗಳಿಂದ ಚೆನ್ನೈನಲ್ಲಿ ಅಮೀರ್ ಖಾನ್ ನೆಲೆಸಿದ್ದಾರೆ ಸದ್ಯ ರಕ್ಷಣಾ ತಂಡ ಅಮೀರ್ ಕುಟುಂಬವನ್ನೂ ರಕ್ಷಣೆ ಮಾಡಿದ್ದಾರೆ.
ರಕ್ಷಣಾ ತಂಡದ ಕಾರ್ಯದ ಕುರಿತು ನಟ ವಿಷ್ಣು ವಿಶಾಲ್ ಮೆಚ್ಚುಗೆ ವ್ಯಕ್ತಪಡಿಸಿದ್ದು ರಕ್ಷಣಾ ತಂಡದ ಜೊತೆ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…