ಚೆನ್ನೈ: ಚಂಡಮಾರುತದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ಥಗೊಂಡಿದೆ, ಚೆನ್ನೈನಲ್ಲಿ ಸುರಿದ ಭಾರಿ ಮಳೆಗೆ ಕೇವಲ ಜನಸಾಮಾನ್ಯರು ಮಾತ್ರವಲ್ಲದೆ ಫಿಲ್ಮ್ ಇಂಡಸ್ಟ್ರಿಯ ಕೆಲವು ಸ್ಟಾರ್ ನಟರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಭಾರಿಯ ಪ್ರವಾಹದಲ್ಲಿ ಸಂಕಷ್ಟಕ್ಕೆ ಸಿಲುಕಿದವರಲ್ಲಿ ತಮಿಳು ನಟ ವಿಷ್ಣು ವಿಶಾಲ್, ಹಾಗೂ ಬಾಲಿವುಡ್ ಸ್ಟಾರ್ ಅಮೀರ್ ಖಾನ್ ಕೂಡ ಸೇರಿದ್ದಾರೆ.
ಸೌತ್ ಸ್ಟಾರ್ ವಿಷ್ಣು ವಿಶಾಲ್ ಮನೆಗೆ ಪ್ರವಾಹದ ನೀರು ನುಗ್ಗಿದ್ದು ಇದರ ಚಿತ್ರಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅಲ್ಲಿನ ಸುತ್ತಮುತ್ತಲ ಪ್ರದೇಶಗಳು ನೀರಿನಿಂದ ಮುಳುಗಡೆಯಾಗಿದ್ದು ಅಲ್ಲಿನ ಜನರು ಕೂಡ ಸಂಕಷ್ಟಕ್ಕೆ ಒಳಗಾಗಿದ್ದಾರೆ ಬದಲಾಗಿ, ಇಲ್ಲಿ ವಿದ್ಯುತ್ ಸಂಪರ್ಕ ಕೂಡಾ ಕಡಿತಗೊಂಡಿದ್ದು ಜನರ ಸಹಾಯಕ್ಕೆ ಫೋನ್ ಕರೆ ಕೂಡ ಮಾಡುವಂತಿಲ್ಲ ಎಂದು ಬರೆದುಕೊಂಡಿದ್ದಾರೆ.
ವಿಷ್ಣು ವಿಶಾಲ್ ಅವರ ಟ್ವೀಟ್ ಗಮನಿಸಿದ ಅವರ ಅಭಿಮಾನಿಗಳು ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದಾರೆ ಕೂಡಲೇ ರಕ್ಷಣಾ ತಂಡ ವಿಷ್ಣು ವಿಶಾಲ್ ಅವರು ಇರುವ ಪ್ರದೇಶಕ್ಕೆ ತೆರಳಿ ವಿಷ್ಣು ವಿಶಾಲ್ ಕುಟುಂಬ ಹಾಗು ಅಲ್ಲಿನ ಇತರ ಜನರನ್ನು ರಕ್ಷಣೆ ಮಾಡಿದ್ದಾರೆ.
ಈ ವೇಳೆ ಚೆನ್ನೈ ನಲ್ಲಿ ನೆಲೆಸಿರುವ ಬಾಲಿವುಡ್ ನಟ ಅಮೀರ್ ಖಾನ್ ಕೂಡ ಪ್ರವಾಹದಲ್ಲಿ ಸಿಲುಕಿದ್ದು ಅವರ ತಾಯಿಯ ಚಿಕಿತ್ಸೆಗಾಗಿ ಕಳೆದ ಕೆಲವು ಸಮಯಗಳಿಂದ ಚೆನ್ನೈನಲ್ಲಿ ಅಮೀರ್ ಖಾನ್ ನೆಲೆಸಿದ್ದಾರೆ ಸದ್ಯ ರಕ್ಷಣಾ ತಂಡ ಅಮೀರ್ ಕುಟುಂಬವನ್ನೂ ರಕ್ಷಣೆ ಮಾಡಿದ್ದಾರೆ.
ರಕ್ಷಣಾ ತಂಡದ ಕಾರ್ಯದ ಕುರಿತು ನಟ ವಿಷ್ಣು ವಿಶಾಲ್ ಮೆಚ್ಚುಗೆ ವ್ಯಕ್ತಪಡಿಸಿದ್ದು ರಕ್ಷಣಾ ತಂಡದ ಜೊತೆ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…