ಚೆನ್ನೈ : CBFC ವಿರುದ್ಧ ತಮಿಳು ನಟ, ನಿರ್ಮಾಪಕ ವಿಶಾಲ್ ಅವರ ಲಂಚ ಕೇಳಿದ ಆರೋಪಕ್ಕೆ ಸಂಬಂಧಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನಿಖೆಗೆ ಶುಕ್ರವಾರ ಆದೇಶಿಸಿದೆ.
ವಿಶಾಲ್ ಅವರು ತಮ್ಮ ಇತ್ತೀಚೆಗೆ ಬಿಡುಗಡೆಯಾದ ‘ಮಾರ್ಕ್ ಆಂಟನಿ’ಯ ಹಿಂದಿ ಸೆನ್ಸಾರ್ ಹಕ್ಕುಗಳಿಗಾಗಿ 6.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿರುವುದಾಗಿ ಸೆಂಟ್ರಲ್ ಬ್ಯೂರೋ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಮುಂಬೈ ಕಚೇರಿಯ ವಿರುದ್ಧ ಆರೋಪಿಸಿದ್ದರು.
ವಿಡಿಯೋ ಟಿಪ್ಪಣಿಯಲ್ಲಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಹಾಯ ಕೋರಿದ್ದರು. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಇದೀಗ ವಿಶಾಲ್ ಅವರ ಭ್ರಷ್ಟಾಚಾರ ಆರೋಪಗಳಿಗೆ X ನಲ್ಲಿ ಅಧಿಕೃತ ಹೇಳಿಕೆಯ ಮೂಲಕ ಪ್ರತಿಕ್ರಿಯಿಸಿದೆ.
‘ನಟ ವಿಶಾಲ್ ಅವರು CBFC ಯಲ್ಲಿನ ಭ್ರಷ್ಟಾಚಾರದ ಕುರಿತು ಹೇಳಿಕೊಂಡಿರುವ ವಿಷಯ ಅತ್ಯಂತ ದುರದೃಷ್ಟಕರವಾಗಿದೆ. ಸರಕಾರವು ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ. ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರನ್ನು ವಿಚಾರಣೆ ನಡೆಸಲು ನಿಯೋಜಿಸಲಾಗಿದೆ. CBFC ನಿಂದ ಯಾವುದೇ ಕಿರುಕುಳದ ಇತರ ನಿದರ್ಶನಗಳ ಬಗ್ಗೆ ಮಾಹಿತಿಯನ್ನು ಒದಗಿಸುವ ಮೂಲಕ ಸಚಿವಾಲಯದೊಂದಿಗೆ ಸಹಕರಿಸಲು ನಾವು ಪ್ರತಿಯೊಬ್ಬರನ್ನು ವಿನಂತಿಸುತ್ತೇವೆ’ ಎಂದು ಎಕ್ಸ್ ಪೋಸ್ಟ್ ಮಾಡಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…