ಚೆನ್ನೈ : CBFC ವಿರುದ್ಧ ತಮಿಳು ನಟ, ನಿರ್ಮಾಪಕ ವಿಶಾಲ್ ಅವರ ಲಂಚ ಕೇಳಿದ ಆರೋಪಕ್ಕೆ ಸಂಬಂಧಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನಿಖೆಗೆ ಶುಕ್ರವಾರ ಆದೇಶಿಸಿದೆ.
ವಿಶಾಲ್ ಅವರು ತಮ್ಮ ಇತ್ತೀಚೆಗೆ ಬಿಡುಗಡೆಯಾದ ‘ಮಾರ್ಕ್ ಆಂಟನಿ’ಯ ಹಿಂದಿ ಸೆನ್ಸಾರ್ ಹಕ್ಕುಗಳಿಗಾಗಿ 6.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿರುವುದಾಗಿ ಸೆಂಟ್ರಲ್ ಬ್ಯೂರೋ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಮುಂಬೈ ಕಚೇರಿಯ ವಿರುದ್ಧ ಆರೋಪಿಸಿದ್ದರು.
ವಿಡಿಯೋ ಟಿಪ್ಪಣಿಯಲ್ಲಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಹಾಯ ಕೋರಿದ್ದರು. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಇದೀಗ ವಿಶಾಲ್ ಅವರ ಭ್ರಷ್ಟಾಚಾರ ಆರೋಪಗಳಿಗೆ X ನಲ್ಲಿ ಅಧಿಕೃತ ಹೇಳಿಕೆಯ ಮೂಲಕ ಪ್ರತಿಕ್ರಿಯಿಸಿದೆ.
‘ನಟ ವಿಶಾಲ್ ಅವರು CBFC ಯಲ್ಲಿನ ಭ್ರಷ್ಟಾಚಾರದ ಕುರಿತು ಹೇಳಿಕೊಂಡಿರುವ ವಿಷಯ ಅತ್ಯಂತ ದುರದೃಷ್ಟಕರವಾಗಿದೆ. ಸರಕಾರವು ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ. ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರನ್ನು ವಿಚಾರಣೆ ನಡೆಸಲು ನಿಯೋಜಿಸಲಾಗಿದೆ. CBFC ನಿಂದ ಯಾವುದೇ ಕಿರುಕುಳದ ಇತರ ನಿದರ್ಶನಗಳ ಬಗ್ಗೆ ಮಾಹಿತಿಯನ್ನು ಒದಗಿಸುವ ಮೂಲಕ ಸಚಿವಾಲಯದೊಂದಿಗೆ ಸಹಕರಿಸಲು ನಾವು ಪ್ರತಿಯೊಬ್ಬರನ್ನು ವಿನಂತಿಸುತ್ತೇವೆ’ ಎಂದು ಎಕ್ಸ್ ಪೋಸ್ಟ್ ಮಾಡಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…