ಬೆಂಗಳೂರು: ಜಂತಕಲ್ ಗಣಿ ಪರವಾನಿಗೆ ನವೀಕರಣ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ರಿಲೀಫ್ ದೊರೆತಿದೆ.
ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಟ್ಟಿದೆ.
ವಿನೋದ್ ಗೋಯಲ್ ಗೆ ಭೂಮಿ ಮಂಜೂರು ಮಾಡುವಂತೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಮಗೆ ಮೌಖಿಕ ಆದೇಶ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಹೇಳಿದ್ದಾರೆ. ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್ಐಟಿ ವಿಚಾರಣೆಗೆ ಒಳಪಡಿಸಿತ್ತು. ಇನ್ನು ವಿನೋದ್ ಗೋಯಲ್ ಮೂಲಕ ತನ್ನ ಮಗ ಗಗನ್ ಬಡೇರಿಯಾ ಅಕೌಂಟ್ಗೆ ಗಂಗಾರಾಮ್ ಹಣ ಹಾಕಿಸಿಕೊಂಡಿದ್ದರು ಎಂಬ ಆರೋಪವೂ ಇದೆ. ಗಂಗಾರಾಮ್ ಐಎಎಸ್ ಅಧಿಕಾರಿ ಆದ್ದರಿಂದ ಸರ್ಕಾರದ ಅನುಮತಿ ಕೇಳಬೇಕು. ಹೀಗಾಗಿ ಗಂಗಾರಾಮ್ ಬಡೇರಿಯಾ ಮೇಲೆ ದೋಷಾರೋಪ ಪಟ್ಟಿ ಹಾಕಲು ಸರ್ಕಾರದ ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್ಐಟಿ ವಿಚಾರಣೆಗೆ ಒಳಪಡಿಸಿದ್ದರು. ಇನ್ನು ವಿಚಾರಣೆ ಬಳಿಕ ಕುಮಾರಸ್ವಾಮಿ ಅವರ ಮೇಲೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ (ಗಂಗಾರಾಮ್ ಐಎಎಸ್ ಅಧಿಕಾರಿ ಮಗ) ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಕುಮಾರಸ್ವಾಮಿಯವರ ಹೆಸರನ್ನು ಎಸ್ಐಟಿ ಪ್ರಕರಣದಿಂದ ಕೈ ಬಿಟ್ಟು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ,..
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…