Featured

ಜಂತಕಲ್ ಗಣಿ ಹಗರಣ : ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ರಿಲೀಫ್ -Vishwanews24

ಬೆಂಗಳೂರು: ಜಂತಕಲ್ ಗಣಿ ಪರವಾನಿಗೆ ನವೀಕರಣ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ರಿಲೀಫ್ ದೊರೆತಿದೆ.

ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಟ್ಟಿದೆ.

ಎಸ್ ಐಟಿ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಗಗನ್ ಬಡೇರಿಯಾ ಹಾಗೂ ವಿನೋದ್ ಗೋಯಲ್ ಹೆಸರು ಉಲ್ಲೇಖಿಸಲಾಗಿದೆ. ಜಂತಕಲ್ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದ ವಿಚಾರಣೆ ವೇಳೆ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಕುಮಾರಸ್ವಾಮಿ ಅವರ ಹೆಸರನ್ನು ಉಲ್ಲೇಖಿಸಿದ್ದರು.

ವಿನೋದ್ ಗೋಯಲ್ ಗೆ ಭೂಮಿ ಮಂಜೂರು ಮಾಡುವಂತೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಮಗೆ ಮೌಖಿಕ ಆದೇಶ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಹೇಳಿದ್ದಾರೆ. ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿತ್ತು. ಇನ್ನು ವಿನೋದ್ ಗೋಯಲ್ ಮೂಲಕ ತನ್ನ ಮಗ ಗಗನ್ ಬಡೇರಿಯಾ ಅಕೌಂಟ್‍ಗೆ ಗಂಗಾರಾಮ್ ಹಣ ಹಾಕಿಸಿಕೊಂಡಿದ್ದರು ಎಂಬ ಆರೋಪವೂ ಇದೆ. ಗಂಗಾರಾಮ್ ಐಎಎಸ್ ಅಧಿಕಾರಿ ಆದ್ದರಿಂದ ಸರ್ಕಾರದ ಅನುಮತಿ ಕೇಳಬೇಕು. ಹೀಗಾಗಿ ಗಂಗಾರಾಮ್ ಬಡೇರಿಯಾ ಮೇಲೆ ದೋಷಾರೋಪ ಪಟ್ಟಿ ಹಾಕಲು ಸರ್ಕಾರದ ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿದ್ದರು. ಇನ್ನು ವಿಚಾರಣೆ ಬಳಿಕ ಕುಮಾರಸ್ವಾಮಿ ಅವರ ಮೇಲೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ (ಗಂಗಾರಾಮ್ ಐಎಎಸ್ ಅಧಿಕಾರಿ ಮಗ) ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಕುಮಾರಸ್ವಾಮಿಯವರ ಹೆಸರನ್ನು ಎಸ್‍ಐಟಿ ಪ್ರಕರಣದಿಂದ ಕೈ ಬಿಟ್ಟು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ,..

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago