ನವದೆಹಲಿ,: “ಜಗತ್ತಿನಲ್ಲಿ ಔಷಧ ಉತ್ಪಾದನಾ ಕ್ಷೇತ್ರದಲ್ಲಿ ಭಾರತದ ಸಾಧನೆ ಹಾಗೂ ಕೊಡುಗೆ ಶ್ಲಾಘನೀಯ. ಇದು ಸಮಾಜದ ಸ್ವಾಸ್ಥ್ಯವನ್ನು ರಕ್ಷಿಸುವಲ್ಲಿ ಸಹಕಾರಿಯಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಟ್ವೀಟ್ ಮೂಲಕ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ದೇಶದ ಎಲ್ಲಾ ವೈದ್ಯರಿಗೆ ಶುಭ ಕೋರಿರುವ ಪ್ರಧಾನಿ ಮೋದಿ ಅವರು, “ವೈದ್ಯರ ದಿನದಂದು ಎಲ್ಲಾ ವೈದ್ಯರಿಗೆ ನನ್ನ ಶುಭಾಶಯಗಳು. ಜಗತ್ತಿನಲ್ಲಿ ಔಷಧ ಉತ್ಪಾದನಾ ಕ್ಷೇತ್ರದಲ್ಲಿ ಭಾರತದ ಸಾಧನೆ ಹಾಗೂ ಕೊಡುಗೆ ಶ್ಲಾಘನೀಯ. ಇದು ಸಮಾಜದ ಸ್ವಾಸ್ಥ್ಯವನ್ನು ರಕ್ಷಿಸುವಲ್ಲಿ ಸಹಕಾರಿ” ಎಂದಿದ್ದಾರೆ.
ಟ್ವೀಟ್ನಲ್ಲಿ ಕಳೆದ ಭಾನುವಾರ ಮನ್ ಕೀ ಬಾತ್ನಲ್ಲಿ ವೈದ್ಯರ ಬಗ್ಗೆ ಆಡಿರುವ ಮಾತುಗಳನ್ನು ಪ್ರಧಾನಿ ಮೋದಿ ಅವರು ಪೋಸ್ಟ್ ಮಾಡಿದ್ದಾರೆ.
“ಕೊರೊನಾ ಸಾಂಕ್ರಾಮಿಕದ ಸಂದರ್ಭ ವೈದ್ಯರು ಸಮಾಜಕ್ಕೆ ನೀಡಿರುವ ಸೇವೆಗೆ ನಾವೆಲ್ಲರೂ ಕೃತಜ್ಞರು. ತಮ್ಮ ಜೀವನದ ಬಗ್ಗೆ ವೈದ್ಯರು ಕಾಳಜಿವಹಿಸದೇ, ನಮ್ಮ ಆರೈಕೆ ಮಾಡಿದ್ದಾರೆ. ಹಾಗಾಗಿ ಈ ಬಾರಿಯ ರಾಷ್ಟ್ರೀಯ ವೈದ್ರ ದಿನವು ಅತ್ಯಂತ ವಿಶೇಷವಾಗಿದೆ” ಎಂದು ಮನ್ ಕೀ ಬಾತ್ನಲ್ಲಿ ಪ್ರಧಾನಿ ಮೋದಿ ತಿಳಿಸಿದ್ದರು.
ಖ್ಯಾತ ವೈದ್ಯ ಹಾಗೂ ಪಶ್ಚಿಮ ಬಂಗಾಳದ ಮಾಜಿ ಸಿಎಂ ಬಿ.ಸಿ ರಾಯ್ ಅವರು ಜನ್ಮದಿನದ ನೆನಪಿಗಾಗಿ ಜು.1 ಅನ್ನು ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…