ರಾಜ್ಯ ನ್ಯೂಸ್

ಜಗತ್ತಿನಲ್ಲಿ ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ’ ; ಬಿ.ಎಸ್‌.ಯಡಿಯೂರಪ್ಪ

ಹಾವೇರಿ: “ಮುಂದಿನ 42 ದಿನಗಳಲ್ಲಿ ಮನೆಗೆ ಹೋಗುವ ಸಿದ್ದರಾಮಯ್ಯ ಬಗ್ಗೆ ನಾನು ಟೀಕೆ ಮಾಡುವುದಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ತಾಲೂಕಿನ ಕಾಗಿನೆಲೆಯಲ್ಲಿ ನಡೆದ ಬಿಜೆಪಿಯ ಹಿಂದುಳಿದ ವರ್ಗಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡಿ, “ಸಿದ್ದರಾಮಯ್ಯನವರಿಗೆ ಹಣಕಾಸು ಸಚಿವರಾಗಿದ್ದಾಗ ಕಾಗಿನೆಲೆ, ಕನಕದಾಸರ ನೆನಪು ಆಗಿರಲಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಕೋಟ್ಯಂತರ ರೂ.ಅನುದಾನ ಕೊಟ್ಟಿದ್ದೆನೆ. ಜಗತ್ತಿನಲ್ಲಿ ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ’ ಎಂದರು. “ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನಾನು ಮುಖ್ಯಮಂತ್ರಿ ಆದ ಮೇಲೆ ಹಿಂದುಳಿದವರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಕೇಂದ್ರದಿಂದ ದೊಡ್ಡ ಆರ್ಥಿಕ ನೆರವು ತಂದು ಅಭಿವೃದ್ಧಿ ಮಾಡುತ್ತೇನೆ. ನೀರಾವರಿಗೆ ಲಕ್ಷ ಕೋಟಿ ರೂ. ಅನುದಾನ ಮೀಸಲಿಟ್ಟು ರೈತರ ಭೂಮಿಗೆ ನೀರು ಹರಿಸುವುದಾಗಿ ಹೇಳಿದರು. ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಕಂಬಳಿ ಹೊದಿಸಿ ಸನ್ಮಾನಿಸಲಾಯಿತು.

ಸಿದ್ದರಾಮಯ್ಯಗೆ ಇದು ಕೊನೇ ಚುನಾವಣೆ: ಕೆ.ಎಸ್‌. ಈಶ್ವರಪ್ಪ
ಹಾವೇರಿ: ಸಿದ್ದರಾಮಯ್ಯ ಅವರೇ ಹೇಳುವಂತೆ ಇದು ಅವರ ಕೊನೆಯ ಚುನಾವಣೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ವಿಧಾನಸಭೆಯಿಂದ ಔಟ್‌ (ಹೊರಗೆ). ಬಿಜೆಪಿ ಇನ್‌ (ಒಳಗೆ) ಆಗಲಿದೆ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ ಹೇಳಿದರು. ಮಂಗಳವಾರ ಕಾಗಿನೆಲೆಯಲ್ಲಿ ನಡೆದ ಬಿಜೆಪಿ ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡಿ, ಸಿದ್ದರಾಮಯ್ಯ ಚುನಾವಣಾ ಚಾಣಕ್ಯ ಅಮಿತ್‌ ಶಾ ಬಗ್ಗೆ ಟೀಕೆ ಮಾಡುತ್ತಾರೆ. ಅವರು ತಮ್ಮ ಕೊನೆಯ ಟೀಕೆ ಮಾಡಿ ಮನೆಗೆ ಹೋಗಲಿ. ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲ್ಲುವುದೇ ಇಲ್ಲ. ಅವರನ್ನು ಸಿಎಂ ಮಾಡುತ್ತೇನೆಂದು ರಾಹುಲ್ ಗಾಂಧಿಯೂ ಹೇಳಿಲ್ಲ. ಸೋನಿಯಾ ಗಾಂಧಿಯೂ ಹೇಳಿಲ್ಲ. ಇನ್ನು ಪಕ್ಷದ ರಾಜ್ಯಾಧ್ಯಕ್ಷರ ಒಪ್ಪಿಗೆ ಕೂಡ ಇಲ್ಲ .ಮೇ 12ಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯ 22ನೇ ರಾಜ್ಯವಾಗಿ ಕರ್ನಾಟಕದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದರು. 

 

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

36 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago