ಸಿದ್ದರಾಮಯ್ಯಗೆ ಇದು ಕೊನೇ ಚುನಾವಣೆ: ಕೆ.ಎಸ್. ಈಶ್ವರಪ್ಪ
ಹಾವೇರಿ: ಸಿದ್ದರಾಮಯ್ಯ ಅವರೇ ಹೇಳುವಂತೆ ಇದು ಅವರ ಕೊನೆಯ ಚುನಾವಣೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ವಿಧಾನಸಭೆಯಿಂದ ಔಟ್ (ಹೊರಗೆ). ಬಿಜೆಪಿ ಇನ್ (ಒಳಗೆ) ಆಗಲಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು. ಮಂಗಳವಾರ ಕಾಗಿನೆಲೆಯಲ್ಲಿ ನಡೆದ ಬಿಜೆಪಿ ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡಿ, ಸಿದ್ದರಾಮಯ್ಯ ಚುನಾವಣಾ ಚಾಣಕ್ಯ ಅಮಿತ್ ಶಾ ಬಗ್ಗೆ ಟೀಕೆ ಮಾಡುತ್ತಾರೆ. ಅವರು ತಮ್ಮ ಕೊನೆಯ ಟೀಕೆ ಮಾಡಿ ಮನೆಗೆ ಹೋಗಲಿ. ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲ್ಲುವುದೇ ಇಲ್ಲ. ಅವರನ್ನು ಸಿಎಂ ಮಾಡುತ್ತೇನೆಂದು ರಾಹುಲ್ ಗಾಂಧಿಯೂ ಹೇಳಿಲ್ಲ. ಸೋನಿಯಾ ಗಾಂಧಿಯೂ ಹೇಳಿಲ್ಲ. ಇನ್ನು ಪಕ್ಷದ ರಾಜ್ಯಾಧ್ಯಕ್ಷರ ಒಪ್ಪಿಗೆ ಕೂಡ ಇಲ್ಲ .ಮೇ 12ಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯ 22ನೇ ರಾಜ್ಯವಾಗಿ ಕರ್ನಾಟಕದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…