Featured

ಜಗತ್ತಿನಾದ್ಯಂತ ಮೈಕ್ರೋಸಾಫ್ಟ್‌ ನಲ್ಲಿ ತಾಂತ್ರಿಕ ಸಮಸ್ಯೆ ; ಸೇವೆಯಲ್ಲಿ ವ್ಯತ್ಯಯ – vishwanews24

ಮೈಕ್ರೋಸಾಫ್ಟ್‌ ನಲ್ಲಿ ತಾಂತ್ರಿಕ ಸಮಸ್ಯೆ ; ವಿಮಾನಯಾನ ಮತ್ತಿತರ ಸೇವೆಯಲ್ಲಿ ವ್ಯತ್ಯಯ

ಹೊಸದಿಲ್ಲಿ: ಮೈಕ್ರೋಸಾಫ್ಟ್‌ 365 ಆ್ಯಪ್‌ಗಳು ಮತ್ತು ಸೇವೆಗಳಲ್ಲಿ ಇಂದು ಉಂಟಾದ ತಾಂತ್ರಿಕ ವೈಫಲ್ಯವು ಭಾರತ ಸೇರಿದಂತೆ ಜಗತ್ತಿನಾದ್ಯಂತ ವಿಮಾನಯಾನ ಮತ್ತಿತರ ಕ್ಷೇತ್ರಗಳ ಸೇವೆಗಳಲ್ಲಿ ವ್ಯತ್ಯಯವುಂಟು ಮಾಡಿದೆ.

ತನ್ನ ಸೇವೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮೈಕ್ರೋಸಾಫ್ಟ್‌ ಹೇಳಿದೆ. ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್‌ನಲ್ಲಿ ಬ್ಯಾಂಕ್‌ಗಳ ಕಂಪ್ಯೂಟರ್‌ ವ್ಯವಸ್ಥೆಗಳು ಬಾಧಿತವಾಗಿ ಸಮಸ್ಯೆ ಉಂಟಾಗಿದ್ದರೆ ಭಾರತದಲ್ಲಿ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಆಕಾಸಾ, ಇಂಡಿಗೋ, ಏರ್‌ ಇಂಡಿಯಾ ಮತ್ತು ಸ್ಪೈಸ್‌ಜೆಟ್‌ ಕೂಡ ಸಮಸ್ಯೆಗಳನ್ನು ಎದುರಿಸಿವೆ. ದಿಲ್ಲಿ ಹಾಗೂ ಬೆಂಗಳೂರು ವಿಮಾನ ನಿಲ್ದಾಣಗಳಲ್ಲೂ ಕೆಲ ಸೇವೆಗಳು ಬಾಧಿತವಾಗಿವೆ. ಹಲವು ವಿಮಾನಯಾನ ಸಂಸ್ಥೆಗಳು ಸೇವೆಯಲ್ಲುಂಟಾದ ವ್ಯತ್ಯಯಗಳ ಬಗ್ಗೆ ಹೇಳಿಕೆಗಳನ್ನು ಬಿಡುಗಡೆಗೊಳಿಸಿವೆ.

ಮೈಕ್ರೋಸಾಫ್ಟ್‌ ಸೇವೆಯಲ್ಲಿ ತಾಂತ್ರಿಕ ವೈಫಲ್ಯದಿಂದ ಲಂಡನ್‌ ಸ್ಟಾಕ್‌ ಎಕ್ಸ್‌ಚೇಂಜ್‌ ಕೂಡ ಸಮಸ್ಯೆಗೀಡಾಗಿದೆ.

ಜಗತ್ತಿನಾದ್ಯಂತ ಲಕ್ಷಾಂತರ ವಿಂಡೋಸ್‌ ಬಳಕೆದಾರರ ಪರದೆಗಳಲ್ಲಿ ಬ್ಲೂ ಸ್ಕ್ರೀನ್‌ ಆಫ್‌ ಡೆತ್‌ ಕಾಣಿಸಿಕೊಂಡಿದೆ ಹಾಗೂ ಕಂಪ್ಯೂಟರ್‌ಗಳು ಶಟ್‌ಡೌನ್‌ ಆಗಿ ಮರುಆರಂಭಗೊಂಡಿವೆ. ಕೆಲವೆಡೆ ಕಂಪ್ಯೂಟರ್‌ಗಳು ಸತತವಾಗಿ ಮರುಆರಂಭಗೊಳ್ಳುತ್ತಿವೆ.

ಬ್ಲೂ ಸ್ಕ್ರೀನ್‌ ದೋಷಗಳನ್ನು ಬ್ಲ್ಯಾಕ್‌ ಸ್ಕ್ರೀನ್‌ ದೋಷಗಳು ಅಥವಾ STOP ಕೋಡ್‌ ದೋಷಗಳೆಂದು ಕರೆಯಲಾಗುತ್ತದೆ.

ಸಮಸ್ಯೆ ಪರಿಹಾರ ನಿಟ್ಟಿನಲ್ಲಿ ಕ್ರಮಗಳು ಮುಂದುವರಿದಿವೆ ಎಂದು ಮೈಕ್ರೋಸಾಫ್ಟ್‌ ಹೇಳಿದೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

2 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

5 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

5 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

5 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

5 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

6 hours ago