Featured

ಜಗತ್ತಿನಾದ್ಯಂತ ಮೈಕ್ರೋಸಾಫ್ಟ್‌ ನಲ್ಲಿ ತಾಂತ್ರಿಕ ಸಮಸ್ಯೆ ; ಸೇವೆಯಲ್ಲಿ ವ್ಯತ್ಯಯ – vishwanews24

ಮೈಕ್ರೋಸಾಫ್ಟ್‌ ನಲ್ಲಿ ತಾಂತ್ರಿಕ ಸಮಸ್ಯೆ ; ವಿಮಾನಯಾನ ಮತ್ತಿತರ ಸೇವೆಯಲ್ಲಿ ವ್ಯತ್ಯಯ

ಹೊಸದಿಲ್ಲಿ: ಮೈಕ್ರೋಸಾಫ್ಟ್‌ 365 ಆ್ಯಪ್‌ಗಳು ಮತ್ತು ಸೇವೆಗಳಲ್ಲಿ ಇಂದು ಉಂಟಾದ ತಾಂತ್ರಿಕ ವೈಫಲ್ಯವು ಭಾರತ ಸೇರಿದಂತೆ ಜಗತ್ತಿನಾದ್ಯಂತ ವಿಮಾನಯಾನ ಮತ್ತಿತರ ಕ್ಷೇತ್ರಗಳ ಸೇವೆಗಳಲ್ಲಿ ವ್ಯತ್ಯಯವುಂಟು ಮಾಡಿದೆ.

ತನ್ನ ಸೇವೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮೈಕ್ರೋಸಾಫ್ಟ್‌ ಹೇಳಿದೆ. ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್‌ನಲ್ಲಿ ಬ್ಯಾಂಕ್‌ಗಳ ಕಂಪ್ಯೂಟರ್‌ ವ್ಯವಸ್ಥೆಗಳು ಬಾಧಿತವಾಗಿ ಸಮಸ್ಯೆ ಉಂಟಾಗಿದ್ದರೆ ಭಾರತದಲ್ಲಿ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಆಕಾಸಾ, ಇಂಡಿಗೋ, ಏರ್‌ ಇಂಡಿಯಾ ಮತ್ತು ಸ್ಪೈಸ್‌ಜೆಟ್‌ ಕೂಡ ಸಮಸ್ಯೆಗಳನ್ನು ಎದುರಿಸಿವೆ. ದಿಲ್ಲಿ ಹಾಗೂ ಬೆಂಗಳೂರು ವಿಮಾನ ನಿಲ್ದಾಣಗಳಲ್ಲೂ ಕೆಲ ಸೇವೆಗಳು ಬಾಧಿತವಾಗಿವೆ. ಹಲವು ವಿಮಾನಯಾನ ಸಂಸ್ಥೆಗಳು ಸೇವೆಯಲ್ಲುಂಟಾದ ವ್ಯತ್ಯಯಗಳ ಬಗ್ಗೆ ಹೇಳಿಕೆಗಳನ್ನು ಬಿಡುಗಡೆಗೊಳಿಸಿವೆ.

ಮೈಕ್ರೋಸಾಫ್ಟ್‌ ಸೇವೆಯಲ್ಲಿ ತಾಂತ್ರಿಕ ವೈಫಲ್ಯದಿಂದ ಲಂಡನ್‌ ಸ್ಟಾಕ್‌ ಎಕ್ಸ್‌ಚೇಂಜ್‌ ಕೂಡ ಸಮಸ್ಯೆಗೀಡಾಗಿದೆ.

ಜಗತ್ತಿನಾದ್ಯಂತ ಲಕ್ಷಾಂತರ ವಿಂಡೋಸ್‌ ಬಳಕೆದಾರರ ಪರದೆಗಳಲ್ಲಿ ಬ್ಲೂ ಸ್ಕ್ರೀನ್‌ ಆಫ್‌ ಡೆತ್‌ ಕಾಣಿಸಿಕೊಂಡಿದೆ ಹಾಗೂ ಕಂಪ್ಯೂಟರ್‌ಗಳು ಶಟ್‌ಡೌನ್‌ ಆಗಿ ಮರುಆರಂಭಗೊಂಡಿವೆ. ಕೆಲವೆಡೆ ಕಂಪ್ಯೂಟರ್‌ಗಳು ಸತತವಾಗಿ ಮರುಆರಂಭಗೊಳ್ಳುತ್ತಿವೆ.

ಬ್ಲೂ ಸ್ಕ್ರೀನ್‌ ದೋಷಗಳನ್ನು ಬ್ಲ್ಯಾಕ್‌ ಸ್ಕ್ರೀನ್‌ ದೋಷಗಳು ಅಥವಾ STOP ಕೋಡ್‌ ದೋಷಗಳೆಂದು ಕರೆಯಲಾಗುತ್ತದೆ.

ಸಮಸ್ಯೆ ಪರಿಹಾರ ನಿಟ್ಟಿನಲ್ಲಿ ಕ್ರಮಗಳು ಮುಂದುವರಿದಿವೆ ಎಂದು ಮೈಕ್ರೋಸಾಫ್ಟ್‌ ಹೇಳಿದೆ.

Vishwa News 24

Recent Posts

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

10 minutes ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

19 minutes ago

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ – vishwanews24

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

25 minutes ago

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ – vishwanews24

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…

35 minutes ago

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ – vishwanews24

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…

40 minutes ago

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು – vishwanews24

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…

45 minutes ago