Featured

ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದ ಮುಕೇಶ್‌ ಅಂಬಾನಿ -Vishwanews24

ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದ ಮುಕೇಶ್‌ ಅಂಬಾನಿ -Vishwanews24

ನ್ಯೂಯಾರ್ಕ್: ರಿಲಯನ್ಸ್‌ ಇಂಡಸ್ಟ್ರೀಜ್‌ನ ಚೇರಮನ್‌ ಮುಕೇಶ್‌ ಅಂಬಾನಿ ಅವರು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದು, ಚೀನಾದ ಉದ್ಯಮಿ ಜಾಕ್‌ ಮಾ ಅವರನ್ನೂ ಹಿಂದಿಕ್ಕಿದ್ದಾರೆ.

ಪ್ರತಿಷ್ಠಿತ ಫೋಬ್ಸ್‌ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಈ ವಿಷಯವನ್ನು ಉಲ್ಲೇಖಿಸಲಾಗಿದೆ.

ಅಮೆರಿಕ ಹಾಗೂ ಚೀನಾ ನಂತರ ಗರಿಷ್ಠ ಸಂಖ್ಯೆಯ ಕೋಟ್ಯಧೀಶರನ್ನು ಹೊಂದಿರುವ ರಾಷ್ಟ್ರ ಭಾರತ ಎಂದು ಫೋಬ್ಸ್‌ ಬಿಡುಗಡೆ ಮಾಡಿರುವ ವಿಶ್ವದ ಸಿರಿವಂತರ ಕುರಿತ 35ನೇ ವಾರ್ಷಿಕ ಪಟ್ಟಿಯಲ್ಲಿ ಹೇಳಲಾಗಿದೆ.

ಅಂಬಾನಿ ಅವರು ಏಷ್ಯಾದಲ್ಲಿಯೇ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿದ್ದು, ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 84.5 ಶತಕೋಟಿ ಡಾಲರ್‌ ಎಂದು ಪತ್ರಿಕೆ ಹೇಳಿದೆ.

ಸಿಡಿ ಪ್ರಕರಣ : ಕಮಲ್‌ಪಂತ್ ಸೇರಿದಂತೆ 3 ಪೊಲೀಸ್ ಅಧಿಕಾರಿಗಳ ವಿರುದ್ದ ಖಾಸಗಿ ಮೊಕದ್ದಮೆ ದಾಖಲು -Vishwanews24

ಅಮೆಜಾನ್‌ನ ಸಿಇಒ ಹಾಗೂ ಸಂಸ್ಥಾಪಕ ಜೆಫ್‌ ಬಿಜೋಸ್‌ ಅವರು ಸತತ ನಾಲ್ಕನೇ ವರ್ಷವೂ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಅವರ ಒಟ್ಟು ಆಸ್ತಿ 177 ಶತಕೋಟಿ ಡಾಲರ್‌ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅವರ ಆಸ್ತಿಯಲ್ಲಿ 64 ಶತಕೋಟಿ ಡಾಲರ್‌ ಏರಿಕೆ ಕಂಡು ಬಂದಿದೆ ಎಂದು ವಿವರಿಸಲಾಗಿದೆ.

ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಸ್ಪೇಸ್‌ಎಕ್ಸ್‌ ಸಂಸ್ಥಾಪಕ ಇಲಾನ್‌ ಮಸ್ಕ್‌ ಇದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 151 ಶತಕೋಟಿ ಡಾಲರ್‌.

‘ಟೆಸ್ಲಾ ಷೇರುಗಳ ಮೌಲ್ಯ ಶೇ 705ರಷ್ಟು ಏರಿಕೆಯಾಗಿರುವುದೇ ಮಸ್ಕ್‌ ಅವರ ಆಸ್ತಿ ಮೌಲ್ಯದಲ್ಲಿ ಹೆಚ್ಚಳವಾಗಲು ಕಾರಣ’ ಎಂದು ಫೋಬ್ಸ್‌ ವಿಶ್ಲೇಷಿಸಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

3 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

3 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

3 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

4 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

4 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

6 hours ago