Featured

ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದ ಮುಕೇಶ್‌ ಅಂಬಾನಿ -Vishwanews24

ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದ ಮುಕೇಶ್‌ ಅಂಬಾನಿ -Vishwanews24

ನ್ಯೂಯಾರ್ಕ್: ರಿಲಯನ್ಸ್‌ ಇಂಡಸ್ಟ್ರೀಜ್‌ನ ಚೇರಮನ್‌ ಮುಕೇಶ್‌ ಅಂಬಾನಿ ಅವರು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದು, ಚೀನಾದ ಉದ್ಯಮಿ ಜಾಕ್‌ ಮಾ ಅವರನ್ನೂ ಹಿಂದಿಕ್ಕಿದ್ದಾರೆ.

ಪ್ರತಿಷ್ಠಿತ ಫೋಬ್ಸ್‌ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಈ ವಿಷಯವನ್ನು ಉಲ್ಲೇಖಿಸಲಾಗಿದೆ.

ಅಮೆರಿಕ ಹಾಗೂ ಚೀನಾ ನಂತರ ಗರಿಷ್ಠ ಸಂಖ್ಯೆಯ ಕೋಟ್ಯಧೀಶರನ್ನು ಹೊಂದಿರುವ ರಾಷ್ಟ್ರ ಭಾರತ ಎಂದು ಫೋಬ್ಸ್‌ ಬಿಡುಗಡೆ ಮಾಡಿರುವ ವಿಶ್ವದ ಸಿರಿವಂತರ ಕುರಿತ 35ನೇ ವಾರ್ಷಿಕ ಪಟ್ಟಿಯಲ್ಲಿ ಹೇಳಲಾಗಿದೆ.

ಅಂಬಾನಿ ಅವರು ಏಷ್ಯಾದಲ್ಲಿಯೇ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿದ್ದು, ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 84.5 ಶತಕೋಟಿ ಡಾಲರ್‌ ಎಂದು ಪತ್ರಿಕೆ ಹೇಳಿದೆ.

ಸಿಡಿ ಪ್ರಕರಣ : ಕಮಲ್‌ಪಂತ್ ಸೇರಿದಂತೆ 3 ಪೊಲೀಸ್ ಅಧಿಕಾರಿಗಳ ವಿರುದ್ದ ಖಾಸಗಿ ಮೊಕದ್ದಮೆ ದಾಖಲು -Vishwanews24

ಅಮೆಜಾನ್‌ನ ಸಿಇಒ ಹಾಗೂ ಸಂಸ್ಥಾಪಕ ಜೆಫ್‌ ಬಿಜೋಸ್‌ ಅವರು ಸತತ ನಾಲ್ಕನೇ ವರ್ಷವೂ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಅವರ ಒಟ್ಟು ಆಸ್ತಿ 177 ಶತಕೋಟಿ ಡಾಲರ್‌ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅವರ ಆಸ್ತಿಯಲ್ಲಿ 64 ಶತಕೋಟಿ ಡಾಲರ್‌ ಏರಿಕೆ ಕಂಡು ಬಂದಿದೆ ಎಂದು ವಿವರಿಸಲಾಗಿದೆ.

ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಸ್ಪೇಸ್‌ಎಕ್ಸ್‌ ಸಂಸ್ಥಾಪಕ ಇಲಾನ್‌ ಮಸ್ಕ್‌ ಇದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 151 ಶತಕೋಟಿ ಡಾಲರ್‌.

‘ಟೆಸ್ಲಾ ಷೇರುಗಳ ಮೌಲ್ಯ ಶೇ 705ರಷ್ಟು ಏರಿಕೆಯಾಗಿರುವುದೇ ಮಸ್ಕ್‌ ಅವರ ಆಸ್ತಿ ಮೌಲ್ಯದಲ್ಲಿ ಹೆಚ್ಚಳವಾಗಲು ಕಾರಣ’ ಎಂದು ಫೋಬ್ಸ್‌ ವಿಶ್ಲೇಷಿಸಿದೆ.

Vishwa News 24

Recent Posts

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

14 minutes ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

23 minutes ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

36 minutes ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

5 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

5 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

5 hours ago