ಜಗದೀಶ್‌ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ. ಘೋಷಿಸಿದ್ದ ಹಣವನ್ನು ಬಡ ವಿದ್ಯಾರ್ಥಿಗಳಿಗೆ ವಿತರಿಸಿದ ಪ್ರತಿಭಾ ಕುಳಾಯಿ -Vishwanews24

Featured, ದಕ್ಷಿಣ ಕನ್ನಡ

ಜಗದೀಶ್‌ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ. ಘೋಷಿಸಿದ್ದ ಹಣವನ್ನು ಬಡ ವಿದ್ಯಾರ್ಥಿಗಳಿಗೆ ವಿತರಿಸಿದ ಪ್ರತಿಭಾ ಕುಳಾಯಿ -Vishwanews24

ಪುತ್ತೂರು: ತುಳುನಾಡಿನ ಅವಳಿ ವೀರ ಪುರುಷರಾದ ಕೋಟಿ-ಚೆನ್ನಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರದಲ್ಲಿ ಜಗದೀಶ ಅಧಿಕಾರಿ ಆಡಿದ ಮಾತಿಗೆ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಅವರ ಮುಖಕ್ಕೆ ಮಸಿ ಬಳಿಯುವವರಿಗೆ 1 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದ ಪ್ರತಿಭಾ ಕುಳಾಯಿ ಅವರು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿಗೆ ಆಗಮಿಸಿ ಆ ಹಣವನ್ನು 10 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗಾಗಿ ವಿತರಿಸಿದ್ದಾರೆ.

BPL ಕಾರ್ಡ್ ‌ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ : ಉಮೇಶ್‌ ಕತ್ತಿ -Vishwanews24

ಜಗದೀಶ್‌ ಅಧಿಕಾರಿ ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಗೆಜ್ಜೆಗಿರಿಯ ಸತ್ಯಧರ್ಮ ಚಾವಡಿಯಲ್ಲಿ ಪ್ರತಿಭಾ ಅವರು ಈ ಮೊತ್ತವನ್ನು ನೀಡಿದರು.

ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ಕಾರ್ಯದರ್ಶಿ ಉಲ್ಲಾಸ್‌ ಕೋಟ್ಯಾನ್‌, ಕೇತ್ರದ ಆನುವಂಶಿಕ ಮೊಕ್ತೇಸರ ಶ್ರೀಧರ ಪೂಜಾರಿ ಉಪಸ್ಥಿತರಿದ್ದರು.

ಕಾಂಗ್ರೆಸ್ ಸರಕಾರ ಮಾಡಿದ್ದು “ಗರೀಬಿ ಹಠಾವೋ” ಆದರೆ, ಬಿಜೆಪಿ ಮಾಡುತ್ತಿರುವುದು “ಗರೀಬೋಂಕೊ ಹಠಾವೋ” : ಯು.ಟಿ. ಖಾದರ್ -Vishwanews24