Featured

ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ – vishwanews24

ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ

ಹೈದರಾಬಾದ್: ವೈಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈಎಸ್ ಶರ್ಮಿಳಾ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಶರ್ಮಿಳಾ ಅವರು ಬುಧವಾರ ತಡರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಶರ್ಮಿಳಾ ಅವರಿಗೆ ಪಕ್ಷದ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು.

ಹೈದರಾಬಾದ್‌ನಲ್ಲಿ ಮಂಗಳವಾರ ನಡೆದ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿದ ನಂತರ, ಶರ್ಮಿಳಾ ಅವರು ಮತ್ತು ಇತರ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಭೇಟಿ ಮಾಡಿ ದೆಹಲಿಯಲ್ಲಿ “ನಿರ್ಣಾಯಕ” ಘೋಷಣೆ ಮಾಡುವುದಾಗಿ ಹೇಳಿದ್ದರು.

ಶರ್ಮಿಳಾ ಅವರು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿಯಾಗಿದ್ದಾರೆ.

ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್‌ನ ಭ್ರಷ್ಟ ಮತ್ತು ಜನವಿರೋಧಿ ಆಡಳಿತವನ್ನು ಕೊನೆಗೊಳಿಸಲು ಶರ್ಮಿಳಾ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು ಅದರಂತೆ ಇಂದು ಪಕ್ಷದ ಹಿರಿಯರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬಲಪಡಿಸುವ ಪಣ ತೊಟ್ಟಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago