ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿರುತ್ತದೆ.
ಅದರಂತೆ ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ. ಹಾಗೂ ಯಾವುದೇ ತೆರಿಗೆ ಅಥವಾ ಪರಿಶೋಧನಾ ಉದ್ದೇಶಕ್ಕೆ ಸದರಿ ದತ್ತಾಂಶವನ್ನು ಬಳಸಿಕೊಳ್ಳುವುದಿಲ್ಲ.ಇದು ಸುರಕ್ಷಿತವಾಗಿ ಇರಿಸಲಾಗುತ್ತದೆ.
ಇದನ್ನೂ ಓದಿ:
ಈ ನಿಟ್ಟಿನಲ್ಲಿ ಏಪ್ರಿಲ್ 1 ರಿಂದ 15 ರವರಗೆ ನಿರ್ದೇಶನಾಲಯದಿಂದ ನೀಡಿರುವ ಸರಳವಾದ ಹಂತಗಳನ್ನು ಅನುಸರಿಸುವುದರ ಅನ್ ಲೈನ್ ನಲ್ಲಿ 15-20 ನಿಮಿಷಗಳಲ್ಲಿ ತಮ್ಮ ಮನೆಯ ಸ್ವಯಂ ಗಣತಿಯನ್ನು ಮಾಡಿಕೊಂಡು ಏಕೀಕೃತ ಸ್ವಯಂ ಗಣತಿ ಗುರುತಿನ ಸಂಖ್ಯೆಯನ್ನು (SELF ENUMERATION ID) ಪಡೆಯಬಹುದಾಗಿರುತ್ತದೆ. ಹಾಗೂ ಪರಿಶೀಲನೆಗೆ ಬರುವ ಗಣತಿದಾರರಿಗೆ ಸದರಿ ಐಡಿಯನ್ನು ಒದಗಿಸಿ ಮನೆಗಣತಿ ಕಾರ್ಯವನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿರುತ್ತದೆ.
ತಮ್ಮ ಸ್ವಯಂ ಮನೆ ಗಣತಿಯ ಕಾರ್ಯದ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಗಣತಿದಾರರು ಮತ್ತು ಮೇಲ್ವಿಚಾರಕರ ಪರಿಶೀಲನೆಗೆ ಒಳಪಟ್ಟಿರುತ್ತದೆ. ಈ ಮೇರೆಗೆ ವಿಕಸಿತ ಭಾರತ @ 2047 ಅಡಿಪಾಯಕ್ಕೆ ಸಹಕರಿಸಲು ಮಂಗಳೂರು ತಾಲೂಕಿನ ಎಲ್ಲಾ ಸಾರ್ವಜನಿಕರು ತಾವೇ ಆನ್ ಲೈನ್ ಲಿಂಕ್
https://se.census.gov.in ಮೂಲಕ ತಮ್ಮ ಮನೆಯ ಗಣತಿಯನ್ನು ಮಾಡಿಕೊಳ್ಳಲು ಮಂಗಳೂರು ತಹಸೀಲ್ದಾರ್ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…