ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿರುತ್ತದೆ.
ಅದರಂತೆ ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ. ಹಾಗೂ ಯಾವುದೇ ತೆರಿಗೆ ಅಥವಾ ಪರಿಶೋಧನಾ ಉದ್ದೇಶಕ್ಕೆ ಸದರಿ ದತ್ತಾಂಶವನ್ನು ಬಳಸಿಕೊಳ್ಳುವುದಿಲ್ಲ.ಇದು ಸುರಕ್ಷಿತವಾಗಿ ಇರಿಸಲಾಗುತ್ತದೆ.
ಇದನ್ನೂ ಓದಿ:
ಈ ನಿಟ್ಟಿನಲ್ಲಿ ಏಪ್ರಿಲ್ 1 ರಿಂದ 15 ರವರಗೆ ನಿರ್ದೇಶನಾಲಯದಿಂದ ನೀಡಿರುವ ಸರಳವಾದ ಹಂತಗಳನ್ನು ಅನುಸರಿಸುವುದರ ಅನ್ ಲೈನ್ ನಲ್ಲಿ 15-20 ನಿಮಿಷಗಳಲ್ಲಿ ತಮ್ಮ ಮನೆಯ ಸ್ವಯಂ ಗಣತಿಯನ್ನು ಮಾಡಿಕೊಂಡು ಏಕೀಕೃತ ಸ್ವಯಂ ಗಣತಿ ಗುರುತಿನ ಸಂಖ್ಯೆಯನ್ನು (SELF ENUMERATION ID) ಪಡೆಯಬಹುದಾಗಿರುತ್ತದೆ. ಹಾಗೂ ಪರಿಶೀಲನೆಗೆ ಬರುವ ಗಣತಿದಾರರಿಗೆ ಸದರಿ ಐಡಿಯನ್ನು ಒದಗಿಸಿ ಮನೆಗಣತಿ ಕಾರ್ಯವನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿರುತ್ತದೆ.
ತಮ್ಮ ಸ್ವಯಂ ಮನೆ ಗಣತಿಯ ಕಾರ್ಯದ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಗಣತಿದಾರರು ಮತ್ತು ಮೇಲ್ವಿಚಾರಕರ ಪರಿಶೀಲನೆಗೆ ಒಳಪಟ್ಟಿರುತ್ತದೆ. ಈ ಮೇರೆಗೆ ವಿಕಸಿತ ಭಾರತ @ 2047 ಅಡಿಪಾಯಕ್ಕೆ ಸಹಕರಿಸಲು ಮಂಗಳೂರು ತಾಲೂಕಿನ ಎಲ್ಲಾ ಸಾರ್ವಜನಿಕರು ತಾವೇ ಆನ್ ಲೈನ್ ಲಿಂಕ್
https://se.census.gov.in ಮೂಲಕ ತಮ್ಮ ಮನೆಯ ಗಣತಿಯನ್ನು ಮಾಡಿಕೊಳ್ಳಲು ಮಂಗಳೂರು ತಹಸೀಲ್ದಾರ್ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…