ಮಂಗಳೂರು,: ನಗರದ ಜನಪ್ರಿಯ ಶಾಸಕರಾದ ವೇದವ್ಯಾಸ್ ಕಾಮತ್ ಸ್ಮಶಾನಗುಡ್ಡೆಯ ಜನತೆಗೆ ಕೊಟ್ಟ ಮಾತಿನಂತೆ ಕೇವಲ 2 ದಿನಗಳಲ್ಲಿ ಕೊಳವೆಬಾವಿ ಹಾಕಿಸುವುದರ ಮೂಲ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮಂಗಳೂರು ನಗರ ದಕ್ಷಿಣದಲ್ಲಿ ಇರುವ ಜೆಪ್ಪಿನಮೊಗರು ಪ್ರದೇಶದ ಸ್ಮಶಾನಗುಡ್ಡೆ ಪರಿಸರದಲ್ಲಿ ವಾಸಿಸುವ ನಾಗರಿಕರು ಅನೇಕ ವರ್ಷದಿಂದ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದರು. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಪ್ರದೇಶವಾಗಿದ್ದರೂ, ಗುಡ್ಡ ಪ್ರದೇಶವಾಗಿರುವುದರಿಂದ ತುಂಬೆಯಿಂದ ಪೈಪಿನ ಮೂಲಕ ಬರುವ ನೀರು ಈ ಭಾಗದಲ್ಲಿ ಎತ್ತರದ ಪ್ರದೇಶದ ಕಾರಣದಿಂದ ತಲುಪುತ್ತಿರಲಿಲ್ಲ.
ಈ ಭಾಗದ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನ ಕಾಣದೇ ಅಲ್ಲಿನ ನಾಗರಿಕರು ಶಾಸಕ ಡಿ ವೇದವ್ಯಾಸ ಕಾಮತ್ ಅವರನ್ನು ಭೇಟಿಯಾಗಿ ಕೊಳವೆಬಾವಿ ಕೊರೆಸಿ ಕುಡಿಯುವ ನೀರಿನ ಸಂಕಷ್ಟವನ್ನು ಬಗೆಹರಿಸಲು ಕೋರಿದರು.
ತಕ್ಷಣ ಅಧಿಕಾರಿಗಳನ್ನು ಸಂಪರ್ಕಿಸಿ ಶಾಸಕ ಕಾಮತ್ ಜಪ್ಪಿನಮೊಗರು ಸ್ಮಶಾನಗುಡ್ಡೆಯಲ್ಲಿ ಶೀಘ್ರದಲ್ಲಿ ಕೊಳವೆಬಾವಿ ತೋಡುವಂತೆ ಸೂಚನೆ ನೀಡಿದರು. ಶಾಸಕ ಕಾಮತ್ ಸೂಚನೆಯಂತೆ ಎರಡು ದಿನಗಳೊಳಗೆ ಅಲ್ಲಿ ಕೊಳವೆಬಾವಿ ತೋಡಲಾಗಿ ನೀರಿನ ಸಮಸ್ಯೆ ಬಗೆಹರಿಸಲಾಗಿದೆ. ಶಾಸಕ ವೇದವ್ಯಾಸ ಕಾಮತ್ ಅವರ ಶೀಘ್ರ ಕ್ರಮ ನಾಗರಿಕರ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…