ಜನನುಡಿ – ಪ್ರಕಾಶ್ ರೈ ವಿರುದ್ದ ಪ್ರತಿಭಟನೆಗೆ ಆಗಮಿಸಿದ ನಾಲ್ವರು ‘ಹಿಂಜಾವೇ’ ಕಾರ್ಯಕರ್ತರ ಬಂಧನ
ಮಂಗಳೂರು : ಮಂಗಳೂರಿನಲ್ಲಿ ಸಮಾನ ಮನಸ್ಕರು ಸೇರಿ ನಡೆಸುತ್ತಿರುವ ಜನನುಡಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ಪ್ರಕಾಶ್ ರೈ ವಿರುದ್ದ ಪ್ರತಿಭಟನೆಗೆ ಆಗಮಿಸಿದ್ದ ನಾಲ್ವರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಭಿಮತ ಮಂಗಳೂರು ಸಂಘಟನೆ ಆಯೋಜಿಸಿರುವ ಜನನುಡಿ ಸಮ್ಮೇಳನ ಮಂಗಳೂರಿನ ನಂತೂರು ವೃತ್ತದ ಸಮೀಪದಲ್ಲಿರುವ ಶಾಂತಿಕಿರಣದಲ್ಲಿ ನಡೆಯಿತ್ತಿದೆ. ಈ ಕಾರ್ಯಕ್ರಮಕ್ಕೆ ಹಿರಿಯ ನಟ ಪ್ರಕಾಶ್ ರೈ ಅತಿಥಿಯಾಗಿ ಆಗಮಿಸಿದ್ದಾರೆ.
ಜನನುಡಿ ಕಾರ್ಯಕ್ರಮ ನಡೆಯುತ್ತಿದ್ದ ಶಾಂತಿ ಕಿರಣ ಸಭಾಂಗಣದ ಆವರಣಕ್ಕೆ ಹಿಂದೂ ಜಾಗರಣ ವೇದಿಕೆಯ ಶರತ್ ಪದವಿನಂಗಡಿ, ಸುಭಾಷ್, ಪ್ರವೀಣ್ ಮತ್ತು ಸುನಿಲ್ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಡಿಸಿಪಿ ಹನುಮಂತರಾಯ ಹೇಳಿದ್ದಾರೆ.


